BREAKING NEWS

ಸರ್ಕಾರ ಮತ್ತು ಜನರ ಹಿತ ಕಾಪಾಡುವ ಜವಾಬ್ದಾರಿಯನ್ನು ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ, 2023ರ ಸಭೆಯಲ್ಲಿ ಮಾತನಾಡಿದರು.

ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಬಾರದು. ಸರ್ಕಾರದ ಕೇಸುಗಳು ಎಂದರೆ ಜನರ ಕೇಸುಗಳು. ಜನರಿಗೆ ನ್ಯಾಯ ಸಿಗುವ ಪ್ರಮಾಣ ಇನ್ನೂ ಹೆಚ್ಚಾಗಬೇಕು. ಬಡವರಿಗೆ ಮೇಲಿನ ನ್ಯಾಯಾಲಯಗಳಿಗೆ ಹೋಗುವ ಶಕ್ತಿ ಇರುವುದಿಲ್ಲ. ಬಡವರಿಗೆ ನ್ಯಾಯ ಸಿಗದಿದ್ದರೆ ಸರಕಾರಿ ವಕೀಲರನ್ನು ನೇಮಿಸಿಕೊಂಡಿದ್ದು ಸಾರ್ಥಕ ಆಗುವುದಿಲ್ಲ ಎಂದರು.

ಪ್ಲೀಡಿಂಗ್ಸ್ ಸರಿಯಾಗಿ, ಪರಿಣಾಮಕಾರಿಯಾಗಿ ಬರೆಯುವುದು ಬಹಳ ಮುಖ್ಯ. ಈ ಹಂತದಲ್ಲೇ ಅಸಡ್ಡೆ, ಉಡಾಫೆತನ ಪ್ರದರ್ಶಿಸಿದರೆ ನ್ಯಾಯ ಪ್ರಕ್ರಿಯೆಯ ಮುಂದಿನ ಎಲ್ಲಾ ಹಂತಗಳಲ್ಲಿ ವೈಫಲ್ಯ ಆಗುತ್ತದೆ. ಆದ್ದರಿಂದ ಬಹಳ ಜವಾಬ್ದಾರಿಯುತವಾಗಿ ಸರ್ಕಾರಿ ವಕೀಲರು ವರ್ತಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ವಕೀಲರು ಮತ್ತು ಅಧಿಕಾರಿಗಳ ವೈಫಲ್ಯಕ್ಕೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ವ್ಯಾಜ್ಯ ಸಣ್ಣದಿರಲಿ, ದೊಡ್ಡದಿರಲಿ ಅದನ್ನು ಗಂಭೀರವಾಗಿ ಪರಿಗಣಿಸಿ ಹೋಂ ವರ್ಕ್ ಮಾಡಿ. ನಮಗೆ ಹಣ ಕೊಡುವುದು ಜನರು. ಜನರ ಹಣದಲ್ಲಿ ನಮಗೆ ಸವಲತ್ತುಗಳು ಸಿಗುತ್ತಿವೆ. ಈ ಬಗ್ಗೆ ನಮಗೆ ಪ್ರಜ್ಞೆ, ಕರ್ತವ್ಯ ಪ್ರಜ್ಞೆ ಹಾಗೂ ಧನ್ಯತೆ ಇರಬೇಕು ಎಂದು ಕಿವಿಮಾತು ಹೇಳಿದರು.

ಕೆಲವು ನ್ಯಾಯಾಧೀಶರು ಮುಖ ನೋಡಿ ಮಣೆ ಹಾಕುತ್ತಾರೆ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ. ಇದನ್ನು ಎಲ್ಲರೂ ಒಟ್ಟಾಗಿ ಅಳಿಸಬೇಕು. ಪ್ರಕರಣಗಳಲ್ಲಿ ಅನಗತ್ಯವಾಗಿ ದಿನಾಂಕ ಪಡೆಯಬಾರದು. ಕೇಸು ನಡೆಸಬೇಕು. ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡುವುದನ್ನು ಪರಿಣಾಮಕಾರಿಯಾಗಿ ವಿರೋಧಿಸಬೇಕು. ಅಲ್ಲೇ ನಿಮ್ಮಗಳ ಅರ್ಹತೆ ಗೊತ್ತಾಗುತ್ತದೆ ಎಂದು ತಿಳಿಸಿದರು‌.

ನ್ಯಾಯಾಂಗ ನಿಂಧನೆ ಆಗದಂತೆ ವೃತ್ತಿಪರತೆ ಪ್ರದರ್ಶಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಸರ್ಕಾರವೇ ನಿಮ್ಮ ಕಕ್ಷಿದಾರ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಕರ್ತವ್ಯ ಪ್ರಜ್ಞೆ ಮೆರೆಯಬೇಕು. ಸರ್ಕಾರ ಮತ್ತು ಜನರ ಹಿತ ಕಾಪಾಡುವ ಮತ್ತು ಸರ್ಕಾರದ ಆಸ್ತಿ ಉಳಿಸುವ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸಭೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

1 hour ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

1 hour ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

1 hour ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

1 hour ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

1 hour ago

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

1 hour ago