BREAKING NEWS

ಸರ್ಕಾರ ಮತ್ತು ಜನರ ಹಿತ ಕಾಪಾಡುವ ಜವಾಬ್ದಾರಿಯನ್ನು ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ, 2023ರ ಸಭೆಯಲ್ಲಿ ಮಾತನಾಡಿದರು.

ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಬಾರದು. ಸರ್ಕಾರದ ಕೇಸುಗಳು ಎಂದರೆ ಜನರ ಕೇಸುಗಳು. ಜನರಿಗೆ ನ್ಯಾಯ ಸಿಗುವ ಪ್ರಮಾಣ ಇನ್ನೂ ಹೆಚ್ಚಾಗಬೇಕು. ಬಡವರಿಗೆ ಮೇಲಿನ ನ್ಯಾಯಾಲಯಗಳಿಗೆ ಹೋಗುವ ಶಕ್ತಿ ಇರುವುದಿಲ್ಲ. ಬಡವರಿಗೆ ನ್ಯಾಯ ಸಿಗದಿದ್ದರೆ ಸರಕಾರಿ ವಕೀಲರನ್ನು ನೇಮಿಸಿಕೊಂಡಿದ್ದು ಸಾರ್ಥಕ ಆಗುವುದಿಲ್ಲ ಎಂದರು.

ಪ್ಲೀಡಿಂಗ್ಸ್ ಸರಿಯಾಗಿ, ಪರಿಣಾಮಕಾರಿಯಾಗಿ ಬರೆಯುವುದು ಬಹಳ ಮುಖ್ಯ. ಈ ಹಂತದಲ್ಲೇ ಅಸಡ್ಡೆ, ಉಡಾಫೆತನ ಪ್ರದರ್ಶಿಸಿದರೆ ನ್ಯಾಯ ಪ್ರಕ್ರಿಯೆಯ ಮುಂದಿನ ಎಲ್ಲಾ ಹಂತಗಳಲ್ಲಿ ವೈಫಲ್ಯ ಆಗುತ್ತದೆ. ಆದ್ದರಿಂದ ಬಹಳ ಜವಾಬ್ದಾರಿಯುತವಾಗಿ ಸರ್ಕಾರಿ ವಕೀಲರು ವರ್ತಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ವಕೀಲರು ಮತ್ತು ಅಧಿಕಾರಿಗಳ ವೈಫಲ್ಯಕ್ಕೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ವ್ಯಾಜ್ಯ ಸಣ್ಣದಿರಲಿ, ದೊಡ್ಡದಿರಲಿ ಅದನ್ನು ಗಂಭೀರವಾಗಿ ಪರಿಗಣಿಸಿ ಹೋಂ ವರ್ಕ್ ಮಾಡಿ. ನಮಗೆ ಹಣ ಕೊಡುವುದು ಜನರು. ಜನರ ಹಣದಲ್ಲಿ ನಮಗೆ ಸವಲತ್ತುಗಳು ಸಿಗುತ್ತಿವೆ. ಈ ಬಗ್ಗೆ ನಮಗೆ ಪ್ರಜ್ಞೆ, ಕರ್ತವ್ಯ ಪ್ರಜ್ಞೆ ಹಾಗೂ ಧನ್ಯತೆ ಇರಬೇಕು ಎಂದು ಕಿವಿಮಾತು ಹೇಳಿದರು.

ಕೆಲವು ನ್ಯಾಯಾಧೀಶರು ಮುಖ ನೋಡಿ ಮಣೆ ಹಾಕುತ್ತಾರೆ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ. ಇದನ್ನು ಎಲ್ಲರೂ ಒಟ್ಟಾಗಿ ಅಳಿಸಬೇಕು. ಪ್ರಕರಣಗಳಲ್ಲಿ ಅನಗತ್ಯವಾಗಿ ದಿನಾಂಕ ಪಡೆಯಬಾರದು. ಕೇಸು ನಡೆಸಬೇಕು. ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡುವುದನ್ನು ಪರಿಣಾಮಕಾರಿಯಾಗಿ ವಿರೋಧಿಸಬೇಕು. ಅಲ್ಲೇ ನಿಮ್ಮಗಳ ಅರ್ಹತೆ ಗೊತ್ತಾಗುತ್ತದೆ ಎಂದು ತಿಳಿಸಿದರು‌.

ನ್ಯಾಯಾಂಗ ನಿಂಧನೆ ಆಗದಂತೆ ವೃತ್ತಿಪರತೆ ಪ್ರದರ್ಶಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಸರ್ಕಾರವೇ ನಿಮ್ಮ ಕಕ್ಷಿದಾರ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಕರ್ತವ್ಯ ಪ್ರಜ್ಞೆ ಮೆರೆಯಬೇಕು. ಸರ್ಕಾರ ಮತ್ತು ಜನರ ಹಿತ ಕಾಪಾಡುವ ಮತ್ತು ಸರ್ಕಾರದ ಆಸ್ತಿ ಉಳಿಸುವ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸಭೆಯಲ್ಲಿ ಉಪಸ್ಥಿತರಿದ್ದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago