BREAKING NEWS

ರೀಲ್ಸ್‌ ಮಾಡುವಾಗ ಜಲಪಾತಕ್ಕೆ ಬಿದ್ದು ಯುವಕ ನಾಪತ್ತೆ ಪ್ರಕರಣ : ವಾರದ ಬಳಿಕ ಪತ್ತೆಯಾದ ಮೃತದೇಹ

ಉಡುಪಿ : ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್‌ ಮಾಡಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟ ಯುವಕ

ಕಳೆದೆರಡು ದಿನಗಳಿಂದ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು ಪೊಟರೆಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಶರತ್ ಕಳೆದ ಭಾನುವಾರ ಸ್ನೇಹಿತನೊಂದಿಗೆ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದರು. ಮಧ್ಯಾಹ್ನ 3:30ರ ಸುಮಾರಿಗೆ ಜಲಪಾತ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಬಿದ್ದು ಸೌಪರ್ಣಿಕ ನದಿ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು. ಅವರು ಜಲಪಾತಕ್ಕೆ ಬೀಳುತ್ತಿದ್ದ ದೃಶ್ಯಗಳು ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿತ್ತು.

ಶರತ್ ಅವರೊಂದಿಗಿದ್ದ ಸ್ನೇಹಿತ ಮಾಹಿತಿ ನೀಡಿದ ತರುವಾಯ ಆತನ ಪತ್ತೆಗೆ ಶೋಧ ಕಾರ್ಯ ಬಿರುಸುಗೊಂಡಿತ್ತು. ಕೊಲ್ಲೂರು ಠಾಣೆ ಉಪನಿರೀಕ್ಷಕಿಯರಾದ ಜಯಶ್ರೀ, ಸುಧಾರಾಣಿ, ಠಾಣೆ ಸಿಬ್ಬಂದಿ, ಅರಣ್ಯ ಇಲಾಖೆ, ಎಸ್.ಡಿ.ಆರ್.ಎಫ್ ತಂಡ, ಉಡುಪಿ, ಬೈಂದೂರು, ಕುಂದಾಪುರ ಅಗ್ನಿಶಾಮಕ ತಂಡದ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆ, ಇಂಬಳದ (ಜಿಗಣೆ) ಹುಳುಗಳು, ಕಡಿದಾದ ರಸ್ತೆಯಲ್ಲಿ ಸಾಗಿ ಕಾರ್ಯಾಚರಣೆ ನಡೆಸಲಾಗಿತ್ತು.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

2 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

2 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

2 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago