ಉಡುಪಿ : ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟ ಯುವಕ
ಕಳೆದೆರಡು ದಿನಗಳಿಂದ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು ಪೊಟರೆಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಶರತ್ ಕಳೆದ ಭಾನುವಾರ ಸ್ನೇಹಿತನೊಂದಿಗೆ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದರು. ಮಧ್ಯಾಹ್ನ 3:30ರ ಸುಮಾರಿಗೆ ಜಲಪಾತ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಬಿದ್ದು ಸೌಪರ್ಣಿಕ ನದಿ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು. ಅವರು ಜಲಪಾತಕ್ಕೆ ಬೀಳುತ್ತಿದ್ದ ದೃಶ್ಯಗಳು ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿತ್ತು.
ಶರತ್ ಅವರೊಂದಿಗಿದ್ದ ಸ್ನೇಹಿತ ಮಾಹಿತಿ ನೀಡಿದ ತರುವಾಯ ಆತನ ಪತ್ತೆಗೆ ಶೋಧ ಕಾರ್ಯ ಬಿರುಸುಗೊಂಡಿತ್ತು. ಕೊಲ್ಲೂರು ಠಾಣೆ ಉಪನಿರೀಕ್ಷಕಿಯರಾದ ಜಯಶ್ರೀ, ಸುಧಾರಾಣಿ, ಠಾಣೆ ಸಿಬ್ಬಂದಿ, ಅರಣ್ಯ ಇಲಾಖೆ, ಎಸ್.ಡಿ.ಆರ್.ಎಫ್ ತಂಡ, ಉಡುಪಿ, ಬೈಂದೂರು, ಕುಂದಾಪುರ ಅಗ್ನಿಶಾಮಕ ತಂಡದ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆ, ಇಂಬಳದ (ಜಿಗಣೆ) ಹುಳುಗಳು, ಕಡಿದಾದ ರಸ್ತೆಯಲ್ಲಿ ಸಾಗಿ ಕಾರ್ಯಾಚರಣೆ ನಡೆಸಲಾಗಿತ್ತು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…