BREAKING NEWS

120ನೇ ವಯಸ್ಸಿಗೆ ಕಾಲಿಟ್ಟ ವಿಶ್ವದ ಅತ್ಯಂತ ದೊಡ್ಡ ಮೊಸಳೆ ಕ್ಯಾಸಿಯಸ್​

ಐಲ್ಯಾಂಡ್ : ಕ್ಯಾಸಿಯಸ್ ಎಂಬ ಹೆಸರಿನ ಈ ದೈತ್ಯ ಮೊಸಳೆ ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನ ಗ್ರೀನ್​ ಐಲ್ಯಾಂಡ್​ನಲ್ಲಿರುವ ಮರೀನ್​ಲ್ಯಾಂಡ್ ಕ್ರೊಕೊಡೈಲ್​ ಪಾರ್ಕ್​ನಲ್ಲಿ ವಾಸವಾಗಿದೆ 18 ಅಡಿ ಉದ್ದದ ಈ ದೈತ್ಯ ಎರಡು ದಿನಗಳ ಹಿಂದೆ 120ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ಇದಕ್ಕೆ ಚಿಕನ್​ ಮತ್ತು ಟ್ಯೂನಾ ಫಿಷ್​ ಖಾದ್ಯಗಳನ್ನು ಕೊಟ್ಟು ಖುಷಿಪಡಿಸಲಾಗಿದೆ. ಈ ಮೊಸಳೆಯು 1987ರಿಂದಲೂ ಇದೇ ಉದ್ಯಾನವದಲ್ಲಿ ವಾಸಿಸುತ್ತಿದ್ದು ಗಿನ್ನೀಸ್​ ವರ್ಲ್ಡ್​ ರಿಕಾರ್ಡ್​ನಲ್ಲಿಯೂ ಇದರ ಹೆಸರು ದಾಖಲಾಗಿದೆ.

ಕ್ಯಾಸಿಯಸ್​ ವಯಸ್ಸಿನ ಹಂಗಿಲ್ಲದೇ ಚೈತನ್ಯಶೀಲವಾಗಿದೆ. ಉದ್ಯಾನದಲ್ಲಿ ಅತ್ಯುತ್ಸಾಹದಿಂದ ಇತರೇ ಮೊಸಳೆಗಳೊಂದಿಗೆ ಬೆರೆಯುತ್ತದೆ ಮತ್ತು ಎಲ್ಲರಿಗಿಂತ ಆಕರ್ಷಕವಾಗಿ ಕಾಣುತ್ತದೆ. ‘ಸಾಮಾನ್ಯವಾಗಿ ವಯಸ್ಸಾದಂತೆ ಮೊಸಳೆಗಳು ವಿಧೇಯ ಮತ್ತು ನಿರಾಸಕ್ತಿಯಿಂದ ವರ್ತಿಸುತ್ತವೆ. ಆದರೆ ಕ್ಯಾಸಿಯಸ್​ ಈಗಲೂ ಉತ್ಸುಕನಾಗಿರುತ್ತದೆ. ಯಾರಾದರೂ ಅದರೆಡೆ ಲಕ್ಷ್ಯಕೊಟ್ಟರೆ ಉತ್ಸಾಹದಿಂದ ಹತ್ತಿರ ಬರಲು ಪ್ರಯತ್ನಿಸುತ್ತದೆ. ಈ ಸಂದರ್ಭದಲ್ಲಿ ಅವನ ಹೊಳೆಯುವ ಕಣ್ಣುಗಳನ್ನು ನೋಡುವುದೇ ಚಂದ’ ಎಂದು 1987ರಲ್ಲಿ ಈ ದೈತ್ಯನನ್ನು ಗ್ರೀನ್ ಲ್ಯಾಂಡ್​ಗೆ ಕರೆತಂದ ಸಂಶೋಧಕ ಟೂಡಿ ಸ್ಕಾಟ್​ ಹೇಳಿದ್ದಾರೆ.

1984ರಲ್ಲಿ ಆಸ್ಟ್ರೇಲಿಯಾದ ಉತ್ತರ ಭಾಗದ ಫಿನ್ನೀಸ್​ ನದಿಯಲ್ಲಿ ಕ್ಯಾಸಿಯಸ್​ ಅನ್ನು ಬಂಧಿಸಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಮೊಸಳೇ ಸಂಶೋಧಕ ಗ್ರೇಮ್ ವೆಬ್​, ‘ಈ ಮೊಸಳೆಯನ್ನು ಹಿಡಿಯುವುದು ಸುಲಭವಾಗಿರಲಿಲ್ಲ. ಈಗಲೂ ಆ ದೃಶ್ಯಗಳು ಕಣ್ಣಮುಂದಿವೆ. ಆಗ ಬರೋಬರೀ 16 ಅಡಿ, 10 ಇಂಚುಗಳಷ್ಟು ಉದ್ದವಿತ್ತು’ ಎಂದು ಆ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ.

lokesh

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

9 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

9 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

11 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 hours ago