BREAKING NEWS

120ನೇ ವಯಸ್ಸಿಗೆ ಕಾಲಿಟ್ಟ ವಿಶ್ವದ ಅತ್ಯಂತ ದೊಡ್ಡ ಮೊಸಳೆ ಕ್ಯಾಸಿಯಸ್​

ಐಲ್ಯಾಂಡ್ : ಕ್ಯಾಸಿಯಸ್ ಎಂಬ ಹೆಸರಿನ ಈ ದೈತ್ಯ ಮೊಸಳೆ ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನ ಗ್ರೀನ್​ ಐಲ್ಯಾಂಡ್​ನಲ್ಲಿರುವ ಮರೀನ್​ಲ್ಯಾಂಡ್ ಕ್ರೊಕೊಡೈಲ್​ ಪಾರ್ಕ್​ನಲ್ಲಿ ವಾಸವಾಗಿದೆ 18 ಅಡಿ ಉದ್ದದ ಈ ದೈತ್ಯ ಎರಡು ದಿನಗಳ ಹಿಂದೆ 120ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ಇದಕ್ಕೆ ಚಿಕನ್​ ಮತ್ತು ಟ್ಯೂನಾ ಫಿಷ್​ ಖಾದ್ಯಗಳನ್ನು ಕೊಟ್ಟು ಖುಷಿಪಡಿಸಲಾಗಿದೆ. ಈ ಮೊಸಳೆಯು 1987ರಿಂದಲೂ ಇದೇ ಉದ್ಯಾನವದಲ್ಲಿ ವಾಸಿಸುತ್ತಿದ್ದು ಗಿನ್ನೀಸ್​ ವರ್ಲ್ಡ್​ ರಿಕಾರ್ಡ್​ನಲ್ಲಿಯೂ ಇದರ ಹೆಸರು ದಾಖಲಾಗಿದೆ.

ಕ್ಯಾಸಿಯಸ್​ ವಯಸ್ಸಿನ ಹಂಗಿಲ್ಲದೇ ಚೈತನ್ಯಶೀಲವಾಗಿದೆ. ಉದ್ಯಾನದಲ್ಲಿ ಅತ್ಯುತ್ಸಾಹದಿಂದ ಇತರೇ ಮೊಸಳೆಗಳೊಂದಿಗೆ ಬೆರೆಯುತ್ತದೆ ಮತ್ತು ಎಲ್ಲರಿಗಿಂತ ಆಕರ್ಷಕವಾಗಿ ಕಾಣುತ್ತದೆ. ‘ಸಾಮಾನ್ಯವಾಗಿ ವಯಸ್ಸಾದಂತೆ ಮೊಸಳೆಗಳು ವಿಧೇಯ ಮತ್ತು ನಿರಾಸಕ್ತಿಯಿಂದ ವರ್ತಿಸುತ್ತವೆ. ಆದರೆ ಕ್ಯಾಸಿಯಸ್​ ಈಗಲೂ ಉತ್ಸುಕನಾಗಿರುತ್ತದೆ. ಯಾರಾದರೂ ಅದರೆಡೆ ಲಕ್ಷ್ಯಕೊಟ್ಟರೆ ಉತ್ಸಾಹದಿಂದ ಹತ್ತಿರ ಬರಲು ಪ್ರಯತ್ನಿಸುತ್ತದೆ. ಈ ಸಂದರ್ಭದಲ್ಲಿ ಅವನ ಹೊಳೆಯುವ ಕಣ್ಣುಗಳನ್ನು ನೋಡುವುದೇ ಚಂದ’ ಎಂದು 1987ರಲ್ಲಿ ಈ ದೈತ್ಯನನ್ನು ಗ್ರೀನ್ ಲ್ಯಾಂಡ್​ಗೆ ಕರೆತಂದ ಸಂಶೋಧಕ ಟೂಡಿ ಸ್ಕಾಟ್​ ಹೇಳಿದ್ದಾರೆ.

1984ರಲ್ಲಿ ಆಸ್ಟ್ರೇಲಿಯಾದ ಉತ್ತರ ಭಾಗದ ಫಿನ್ನೀಸ್​ ನದಿಯಲ್ಲಿ ಕ್ಯಾಸಿಯಸ್​ ಅನ್ನು ಬಂಧಿಸಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಮೊಸಳೇ ಸಂಶೋಧಕ ಗ್ರೇಮ್ ವೆಬ್​, ‘ಈ ಮೊಸಳೆಯನ್ನು ಹಿಡಿಯುವುದು ಸುಲಭವಾಗಿರಲಿಲ್ಲ. ಈಗಲೂ ಆ ದೃಶ್ಯಗಳು ಕಣ್ಣಮುಂದಿವೆ. ಆಗ ಬರೋಬರೀ 16 ಅಡಿ, 10 ಇಂಚುಗಳಷ್ಟು ಉದ್ದವಿತ್ತು’ ಎಂದು ಆ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ.

lokesh

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

31 mins ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

3 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

5 hours ago