BREAKING NEWS

120ನೇ ವಯಸ್ಸಿಗೆ ಕಾಲಿಟ್ಟ ವಿಶ್ವದ ಅತ್ಯಂತ ದೊಡ್ಡ ಮೊಸಳೆ ಕ್ಯಾಸಿಯಸ್​

ಐಲ್ಯಾಂಡ್ : ಕ್ಯಾಸಿಯಸ್ ಎಂಬ ಹೆಸರಿನ ಈ ದೈತ್ಯ ಮೊಸಳೆ ಆಸ್ಟ್ರೇಲಿಯಾದ ಕ್ವೀನ್ಸ್​ಲ್ಯಾಂಡ್​ನ ಗ್ರೀನ್​ ಐಲ್ಯಾಂಡ್​ನಲ್ಲಿರುವ ಮರೀನ್​ಲ್ಯಾಂಡ್ ಕ್ರೊಕೊಡೈಲ್​ ಪಾರ್ಕ್​ನಲ್ಲಿ ವಾಸವಾಗಿದೆ 18 ಅಡಿ ಉದ್ದದ ಈ ದೈತ್ಯ ಎರಡು ದಿನಗಳ ಹಿಂದೆ 120ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ. ಈ ಸಂದರ್ಭದಲ್ಲಿ ಇದಕ್ಕೆ ಚಿಕನ್​ ಮತ್ತು ಟ್ಯೂನಾ ಫಿಷ್​ ಖಾದ್ಯಗಳನ್ನು ಕೊಟ್ಟು ಖುಷಿಪಡಿಸಲಾಗಿದೆ. ಈ ಮೊಸಳೆಯು 1987ರಿಂದಲೂ ಇದೇ ಉದ್ಯಾನವದಲ್ಲಿ ವಾಸಿಸುತ್ತಿದ್ದು ಗಿನ್ನೀಸ್​ ವರ್ಲ್ಡ್​ ರಿಕಾರ್ಡ್​ನಲ್ಲಿಯೂ ಇದರ ಹೆಸರು ದಾಖಲಾಗಿದೆ.

ಕ್ಯಾಸಿಯಸ್​ ವಯಸ್ಸಿನ ಹಂಗಿಲ್ಲದೇ ಚೈತನ್ಯಶೀಲವಾಗಿದೆ. ಉದ್ಯಾನದಲ್ಲಿ ಅತ್ಯುತ್ಸಾಹದಿಂದ ಇತರೇ ಮೊಸಳೆಗಳೊಂದಿಗೆ ಬೆರೆಯುತ್ತದೆ ಮತ್ತು ಎಲ್ಲರಿಗಿಂತ ಆಕರ್ಷಕವಾಗಿ ಕಾಣುತ್ತದೆ. ‘ಸಾಮಾನ್ಯವಾಗಿ ವಯಸ್ಸಾದಂತೆ ಮೊಸಳೆಗಳು ವಿಧೇಯ ಮತ್ತು ನಿರಾಸಕ್ತಿಯಿಂದ ವರ್ತಿಸುತ್ತವೆ. ಆದರೆ ಕ್ಯಾಸಿಯಸ್​ ಈಗಲೂ ಉತ್ಸುಕನಾಗಿರುತ್ತದೆ. ಯಾರಾದರೂ ಅದರೆಡೆ ಲಕ್ಷ್ಯಕೊಟ್ಟರೆ ಉತ್ಸಾಹದಿಂದ ಹತ್ತಿರ ಬರಲು ಪ್ರಯತ್ನಿಸುತ್ತದೆ. ಈ ಸಂದರ್ಭದಲ್ಲಿ ಅವನ ಹೊಳೆಯುವ ಕಣ್ಣುಗಳನ್ನು ನೋಡುವುದೇ ಚಂದ’ ಎಂದು 1987ರಲ್ಲಿ ಈ ದೈತ್ಯನನ್ನು ಗ್ರೀನ್ ಲ್ಯಾಂಡ್​ಗೆ ಕರೆತಂದ ಸಂಶೋಧಕ ಟೂಡಿ ಸ್ಕಾಟ್​ ಹೇಳಿದ್ದಾರೆ.

1984ರಲ್ಲಿ ಆಸ್ಟ್ರೇಲಿಯಾದ ಉತ್ತರ ಭಾಗದ ಫಿನ್ನೀಸ್​ ನದಿಯಲ್ಲಿ ಕ್ಯಾಸಿಯಸ್​ ಅನ್ನು ಬಂಧಿಸಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಮೊಸಳೇ ಸಂಶೋಧಕ ಗ್ರೇಮ್ ವೆಬ್​, ‘ಈ ಮೊಸಳೆಯನ್ನು ಹಿಡಿಯುವುದು ಸುಲಭವಾಗಿರಲಿಲ್ಲ. ಈಗಲೂ ಆ ದೃಶ್ಯಗಳು ಕಣ್ಣಮುಂದಿವೆ. ಆಗ ಬರೋಬರೀ 16 ಅಡಿ, 10 ಇಂಚುಗಳಷ್ಟು ಉದ್ದವಿತ್ತು’ ಎಂದು ಆ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ.

lokesh

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

3 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

4 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

5 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

6 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

6 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

7 hours ago