BREAKING NEWS

ವರ್ತೂರ್‌ ಸಂತೋಷ್‌ ಆಯ್ತು ಈಗ ತನಿಷಾಗೆ ಸಂಕಷ್ಟ; ಅರೆಸ್ಟ್‌ ಆಗ್ತಾರಾ ಕುಪ್ಪಂಡ?

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್‌ ಬಾಸ್‌ನ ಹತ್ತನೇ ಆವೃತ್ತಿ ಸದ್ಯ ನಡೆಯುತ್ತಿದ್ದು ತಿಂಗಳು ಈ ಸೀಸನ್‌ ಶುರುವಾಗಿ ತಿಂಗಳು ಕಳೆದಿದೆ. ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ನಡುವಿನ ಕಿತ್ತಾಟ ನೋಡುಗರಿಗೆ ಹೆಚ್ಚಿನ ಮನರಂಜನೆ ನೀಡುತ್ತಿದ್ದು, ಈ ಅಂಶ ಕಾರ್ಯಕ್ರಮದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗುವಂತೆ ಮಾಡಿದೆ.

ಇನ್ನು ಮನೆ ಒಳಗಿನ ಒಂದಷ್ಟು ಅಂಶ ಸಾಮಾಜಿಕ ಜಾಲತಾಣದಲ್ಲಿ ವಿವಾದದ ರೂಪ ಪಡೆದುಕೊಳ್ಳುತ್ತಿದ್ದು ಈ ವಿವಾದ ಇದೀಗ ಬಂಧನದವರೆಗೂ ಸಹ ತಲುಪಿದೆ. ಹೌದು, ತನಿಷ ಕುಪ್ಪಂಡ ನವೆಂಬರ್‌ 8ರಂದು ಪ್ರಸಾರವಾದ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ತಮ್ಮ ಸಹಸ್ಪರ್ಧಿ ಡ್ರೋನ್‌ ಪ್ರತಾಪ್‌ ಅವರ ಜತೆ ಮಾತನಾಡುವಾಗ “ಏನೋ ನೀನು ಒಡ್ಡನ ಥರ ಆಡ್ತೀಯ” ಎಂಬ ಹೇಳಿಕೆಯನ್ನು ನೀಡಿದ್ದಾರೆ.

ಹೀಗೆ ಮಾತನಾಡುವಾಗ ವಡ್ಡ ಎಂಬ ಪದ ಬಳಕೆ ಮಾಡಿರುವುದರಿಂದ ತನಿಷಾ ಕುಪ್ಪಂಡ ವಿರುದ್ಧ ಭೋವಿ ಸಮುದಾಯದವರು ಕಿಡಿಕಾರಿದ್ದಾರೆ. ತನಿಷಾ ತಮ್ಮ ಜಾತಿನಿಂದನೆ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಬೆಂಗಳೂರಿನ ಕುಂಬಳಗೋಡಿ ಪೊಲೀಸ್‌ ಠಾಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡ ದೌರ್ಜನ್ಯ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದಾರೆ.

ಸದ್ಯ ತನಿಷಾ ಕುಪ್ಪಂಡ ಈ ದೂರಿನ ಅಡಿಯಲ್ಲಿ ಬಂಧನಕ್ಕೊಳಗಾಗಲಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ. ಇನ್ನು ಕಳೆದ ದಿನಗಳ ಹಿಂದಷ್ಟೇ ಇದೇ ಬಿಗ್‌ ಬಾಸ್ ಕಾರ್ಯಕ್ರಮದ ಮತ್ತೋರ್ವ ಸ್ಪರ್ಧಿಯಾಗಿರುವ ವರ್ತೂರ್‌ ಸಂತೋಷ್‌ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಕಾರಣಕ್ಕಾಗಿ ಬಂಧಕ್ಕೊಳಗಾಗಿದ್ದರು. ಈ ಪ್ರಕರಣ ಭಾರೀ ಸದ್ದು ಮಾಡಿ ಹುಲಿ ಉಗರು ಧರಿಸಿದ್ದ ಸೆಲೆಬ್ರಿಟಿಗಳ ಬಂಧನ ಯಾವಾಗ ಎಂದು ನೆಟ್ಟಿಗರು ಪ್ರಶ್ನೆಯನ್ನು ಮಾಡಿದ್ದರು. ಇದರ ತರುವಾಯ ಅರಣ್ಯ ಇಲಾಖೆ ಪೊಲೀಸರು ಆಯಾ ಸೆಲೆಬ್ರಿಟಿಗಳ ಮನೆಗೆ ಭೇಟಿ ನೀಡಿ ಹುಲಿ ಉಗುರಿಗಾಗಿ ಶೋಧ ನಡೆಸಿದ್ದರು.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago