BREAKING NEWS

ವರ್ತೂರ್‌ ಸಂತೋಷ್‌ ಆಯ್ತು ಈಗ ತನಿಷಾಗೆ ಸಂಕಷ್ಟ; ಅರೆಸ್ಟ್‌ ಆಗ್ತಾರಾ ಕುಪ್ಪಂಡ?

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್‌ ಬಾಸ್‌ನ ಹತ್ತನೇ ಆವೃತ್ತಿ ಸದ್ಯ ನಡೆಯುತ್ತಿದ್ದು ತಿಂಗಳು ಈ ಸೀಸನ್‌ ಶುರುವಾಗಿ ತಿಂಗಳು ಕಳೆದಿದೆ. ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ನಡುವಿನ ಕಿತ್ತಾಟ ನೋಡುಗರಿಗೆ ಹೆಚ್ಚಿನ ಮನರಂಜನೆ ನೀಡುತ್ತಿದ್ದು, ಈ ಅಂಶ ಕಾರ್ಯಕ್ರಮದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗುವಂತೆ ಮಾಡಿದೆ.

ಇನ್ನು ಮನೆ ಒಳಗಿನ ಒಂದಷ್ಟು ಅಂಶ ಸಾಮಾಜಿಕ ಜಾಲತಾಣದಲ್ಲಿ ವಿವಾದದ ರೂಪ ಪಡೆದುಕೊಳ್ಳುತ್ತಿದ್ದು ಈ ವಿವಾದ ಇದೀಗ ಬಂಧನದವರೆಗೂ ಸಹ ತಲುಪಿದೆ. ಹೌದು, ತನಿಷ ಕುಪ್ಪಂಡ ನವೆಂಬರ್‌ 8ರಂದು ಪ್ರಸಾರವಾದ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ತಮ್ಮ ಸಹಸ್ಪರ್ಧಿ ಡ್ರೋನ್‌ ಪ್ರತಾಪ್‌ ಅವರ ಜತೆ ಮಾತನಾಡುವಾಗ “ಏನೋ ನೀನು ಒಡ್ಡನ ಥರ ಆಡ್ತೀಯ” ಎಂಬ ಹೇಳಿಕೆಯನ್ನು ನೀಡಿದ್ದಾರೆ.

ಹೀಗೆ ಮಾತನಾಡುವಾಗ ವಡ್ಡ ಎಂಬ ಪದ ಬಳಕೆ ಮಾಡಿರುವುದರಿಂದ ತನಿಷಾ ಕುಪ್ಪಂಡ ವಿರುದ್ಧ ಭೋವಿ ಸಮುದಾಯದವರು ಕಿಡಿಕಾರಿದ್ದಾರೆ. ತನಿಷಾ ತಮ್ಮ ಜಾತಿನಿಂದನೆ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಬೆಂಗಳೂರಿನ ಕುಂಬಳಗೋಡಿ ಪೊಲೀಸ್‌ ಠಾಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡ ದೌರ್ಜನ್ಯ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದಾರೆ.

ಸದ್ಯ ತನಿಷಾ ಕುಪ್ಪಂಡ ಈ ದೂರಿನ ಅಡಿಯಲ್ಲಿ ಬಂಧನಕ್ಕೊಳಗಾಗಲಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ. ಇನ್ನು ಕಳೆದ ದಿನಗಳ ಹಿಂದಷ್ಟೇ ಇದೇ ಬಿಗ್‌ ಬಾಸ್ ಕಾರ್ಯಕ್ರಮದ ಮತ್ತೋರ್ವ ಸ್ಪರ್ಧಿಯಾಗಿರುವ ವರ್ತೂರ್‌ ಸಂತೋಷ್‌ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಕಾರಣಕ್ಕಾಗಿ ಬಂಧಕ್ಕೊಳಗಾಗಿದ್ದರು. ಈ ಪ್ರಕರಣ ಭಾರೀ ಸದ್ದು ಮಾಡಿ ಹುಲಿ ಉಗರು ಧರಿಸಿದ್ದ ಸೆಲೆಬ್ರಿಟಿಗಳ ಬಂಧನ ಯಾವಾಗ ಎಂದು ನೆಟ್ಟಿಗರು ಪ್ರಶ್ನೆಯನ್ನು ಮಾಡಿದ್ದರು. ಇದರ ತರುವಾಯ ಅರಣ್ಯ ಇಲಾಖೆ ಪೊಲೀಸರು ಆಯಾ ಸೆಲೆಬ್ರಿಟಿಗಳ ಮನೆಗೆ ಭೇಟಿ ನೀಡಿ ಹುಲಿ ಉಗುರಿಗಾಗಿ ಶೋಧ ನಡೆಸಿದ್ದರು.

andolana

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

1 hour ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

2 hours ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

2 hours ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

2 hours ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

2 hours ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

2 hours ago