ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ ಬಾಸ್ನ ಹತ್ತನೇ ಆವೃತ್ತಿ ಸದ್ಯ ನಡೆಯುತ್ತಿದ್ದು ತಿಂಗಳು ಈ ಸೀಸನ್ ಶುರುವಾಗಿ ತಿಂಗಳು ಕಳೆದಿದೆ. ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ನಡುವಿನ ಕಿತ್ತಾಟ ನೋಡುಗರಿಗೆ ಹೆಚ್ಚಿನ ಮನರಂಜನೆ ನೀಡುತ್ತಿದ್ದು, ಈ ಅಂಶ ಕಾರ್ಯಕ್ರಮದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗುವಂತೆ ಮಾಡಿದೆ.
ಇನ್ನು ಮನೆ ಒಳಗಿನ ಒಂದಷ್ಟು ಅಂಶ ಸಾಮಾಜಿಕ ಜಾಲತಾಣದಲ್ಲಿ ವಿವಾದದ ರೂಪ ಪಡೆದುಕೊಳ್ಳುತ್ತಿದ್ದು ಈ ವಿವಾದ ಇದೀಗ ಬಂಧನದವರೆಗೂ ಸಹ ತಲುಪಿದೆ. ಹೌದು, ತನಿಷ ಕುಪ್ಪಂಡ ನವೆಂಬರ್ 8ರಂದು ಪ್ರಸಾರವಾದ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ತಮ್ಮ ಸಹಸ್ಪರ್ಧಿ ಡ್ರೋನ್ ಪ್ರತಾಪ್ ಅವರ ಜತೆ ಮಾತನಾಡುವಾಗ “ಏನೋ ನೀನು ಒಡ್ಡನ ಥರ ಆಡ್ತೀಯ” ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಹೀಗೆ ಮಾತನಾಡುವಾಗ ವಡ್ಡ ಎಂಬ ಪದ ಬಳಕೆ ಮಾಡಿರುವುದರಿಂದ ತನಿಷಾ ಕುಪ್ಪಂಡ ವಿರುದ್ಧ ಭೋವಿ ಸಮುದಾಯದವರು ಕಿಡಿಕಾರಿದ್ದಾರೆ. ತನಿಷಾ ತಮ್ಮ ಜಾತಿನಿಂದನೆ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಬೆಂಗಳೂರಿನ ಕುಂಬಳಗೋಡಿ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡ ದೌರ್ಜನ್ಯ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದಾರೆ.
ಸದ್ಯ ತನಿಷಾ ಕುಪ್ಪಂಡ ಈ ದೂರಿನ ಅಡಿಯಲ್ಲಿ ಬಂಧನಕ್ಕೊಳಗಾಗಲಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ. ಇನ್ನು ಕಳೆದ ದಿನಗಳ ಹಿಂದಷ್ಟೇ ಇದೇ ಬಿಗ್ ಬಾಸ್ ಕಾರ್ಯಕ್ರಮದ ಮತ್ತೋರ್ವ ಸ್ಪರ್ಧಿಯಾಗಿರುವ ವರ್ತೂರ್ ಸಂತೋಷ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಕಾರಣಕ್ಕಾಗಿ ಬಂಧಕ್ಕೊಳಗಾಗಿದ್ದರು. ಈ ಪ್ರಕರಣ ಭಾರೀ ಸದ್ದು ಮಾಡಿ ಹುಲಿ ಉಗರು ಧರಿಸಿದ್ದ ಸೆಲೆಬ್ರಿಟಿಗಳ ಬಂಧನ ಯಾವಾಗ ಎಂದು ನೆಟ್ಟಿಗರು ಪ್ರಶ್ನೆಯನ್ನು ಮಾಡಿದ್ದರು. ಇದರ ತರುವಾಯ ಅರಣ್ಯ ಇಲಾಖೆ ಪೊಲೀಸರು ಆಯಾ ಸೆಲೆಬ್ರಿಟಿಗಳ ಮನೆಗೆ ಭೇಟಿ ನೀಡಿ ಹುಲಿ ಉಗುರಿಗಾಗಿ ಶೋಧ ನಡೆಸಿದ್ದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…