BREAKING NEWS

ವರ್ತೂರ್‌ ಸಂತೋಷ್‌ ಆಯ್ತು ಈಗ ತನಿಷಾಗೆ ಸಂಕಷ್ಟ; ಅರೆಸ್ಟ್‌ ಆಗ್ತಾರಾ ಕುಪ್ಪಂಡ?

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್‌ ಬಾಸ್‌ನ ಹತ್ತನೇ ಆವೃತ್ತಿ ಸದ್ಯ ನಡೆಯುತ್ತಿದ್ದು ತಿಂಗಳು ಈ ಸೀಸನ್‌ ಶುರುವಾಗಿ ತಿಂಗಳು ಕಳೆದಿದೆ. ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ನಡುವಿನ ಕಿತ್ತಾಟ ನೋಡುಗರಿಗೆ ಹೆಚ್ಚಿನ ಮನರಂಜನೆ ನೀಡುತ್ತಿದ್ದು, ಈ ಅಂಶ ಕಾರ್ಯಕ್ರಮದ ಮೇಲೆ ಮಿಶ್ರ ಪ್ರತಿಕ್ರಿಯೆ ಉಂಟಾಗುವಂತೆ ಮಾಡಿದೆ.

ಇನ್ನು ಮನೆ ಒಳಗಿನ ಒಂದಷ್ಟು ಅಂಶ ಸಾಮಾಜಿಕ ಜಾಲತಾಣದಲ್ಲಿ ವಿವಾದದ ರೂಪ ಪಡೆದುಕೊಳ್ಳುತ್ತಿದ್ದು ಈ ವಿವಾದ ಇದೀಗ ಬಂಧನದವರೆಗೂ ಸಹ ತಲುಪಿದೆ. ಹೌದು, ತನಿಷ ಕುಪ್ಪಂಡ ನವೆಂಬರ್‌ 8ರಂದು ಪ್ರಸಾರವಾದ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ತಮ್ಮ ಸಹಸ್ಪರ್ಧಿ ಡ್ರೋನ್‌ ಪ್ರತಾಪ್‌ ಅವರ ಜತೆ ಮಾತನಾಡುವಾಗ “ಏನೋ ನೀನು ಒಡ್ಡನ ಥರ ಆಡ್ತೀಯ” ಎಂಬ ಹೇಳಿಕೆಯನ್ನು ನೀಡಿದ್ದಾರೆ.

ಹೀಗೆ ಮಾತನಾಡುವಾಗ ವಡ್ಡ ಎಂಬ ಪದ ಬಳಕೆ ಮಾಡಿರುವುದರಿಂದ ತನಿಷಾ ಕುಪ್ಪಂಡ ವಿರುದ್ಧ ಭೋವಿ ಸಮುದಾಯದವರು ಕಿಡಿಕಾರಿದ್ದಾರೆ. ತನಿಷಾ ತಮ್ಮ ಜಾತಿನಿಂದನೆ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಬೆಂಗಳೂರಿನ ಕುಂಬಳಗೋಡಿ ಪೊಲೀಸ್‌ ಠಾಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡ ದೌರ್ಜನ್ಯ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದಾರೆ.

ಸದ್ಯ ತನಿಷಾ ಕುಪ್ಪಂಡ ಈ ದೂರಿನ ಅಡಿಯಲ್ಲಿ ಬಂಧನಕ್ಕೊಳಗಾಗಲಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ. ಇನ್ನು ಕಳೆದ ದಿನಗಳ ಹಿಂದಷ್ಟೇ ಇದೇ ಬಿಗ್‌ ಬಾಸ್ ಕಾರ್ಯಕ್ರಮದ ಮತ್ತೋರ್ವ ಸ್ಪರ್ಧಿಯಾಗಿರುವ ವರ್ತೂರ್‌ ಸಂತೋಷ್‌ ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದ ಕಾರಣಕ್ಕಾಗಿ ಬಂಧಕ್ಕೊಳಗಾಗಿದ್ದರು. ಈ ಪ್ರಕರಣ ಭಾರೀ ಸದ್ದು ಮಾಡಿ ಹುಲಿ ಉಗರು ಧರಿಸಿದ್ದ ಸೆಲೆಬ್ರಿಟಿಗಳ ಬಂಧನ ಯಾವಾಗ ಎಂದು ನೆಟ್ಟಿಗರು ಪ್ರಶ್ನೆಯನ್ನು ಮಾಡಿದ್ದರು. ಇದರ ತರುವಾಯ ಅರಣ್ಯ ಇಲಾಖೆ ಪೊಲೀಸರು ಆಯಾ ಸೆಲೆಬ್ರಿಟಿಗಳ ಮನೆಗೆ ಭೇಟಿ ನೀಡಿ ಹುಲಿ ಉಗುರಿಗಾಗಿ ಶೋಧ ನಡೆಸಿದ್ದರು.

andolana

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

2 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

3 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

4 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

5 hours ago