BREAKING NEWS

ಜಾತಿ ಗಣತಿ: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಎಚ್‌ಡಿಕೆ!

ರಾಮನಗರ : ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ, ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವಂತೆಯೇ, ಈ ವಿಚಾರದಲ್ಲಿ  ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಡದಿಯ ಕೇತಗಾನಹಳ್ಳಿಯ ಭಾನುವಾರ ನಡೆದ ರಾಮನಗರ ಜಿಲ್ಲೆಯ ಜೆಡಿಎಸ್ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜಾತಿ ಗಣತಿ ವರದಿ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ. ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಕಾಂತರಾಜು ವರದಿಯನ್ನು  ಕುಮಾರಸ್ವಾಮಿ ಒಪ್ಪಲಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಸದಸ್ಯ ಕಾರ್ಯದರ್ಶಿ ಸಹಿ ಇಲ್ಲದೆ ಆ ವರದಿಯನ್ನು ಸ್ವೀಕಾರ ಮಾಡುವುದು ಹೇಗೆ? ಎನ್ನುವ ಅರಿವು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ತಿರುಗೇಟು ನೀಡಿದರು.

ಸಮ್ಮಿಶ್ರ ಸರ್ಕಾರ ಸಂದರ್ಭದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಒಮ್ಮೆಯಾದರೂ ಕಾಂತರಾಜು ವರದಿ ಬಗ್ಗೆ ಸಿದ್ದರಾಮಯ್ಯ ಚರ್ಚೆ ಮಾಡಿಲ್ಲ.  14 ತಿಂಗಳಲ್ಲಿ ಯಾವತ್ತಾದ್ರು ಈ ಬಗ್ಗೆ ಮಾತಾಡುತ್ತಿದ್ರಾ? ಜಾತಿಗಣತಿ ಮುಖ್ಯವಲ್ಲ, ಎಲ್ಲ ಜಾತಿಯಲ್ಲಿರುವ ಬಡವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಿಡಿಕಾರಿದರು.

ಜಾತ್ಯತೀತ ಎನ್ನುವ ಕಾಂಗ್ರೆಸ್ ನವರು ಜಾತಿ ಗಣತಿ ವರದಿಯಿಂದ ಜಾತಿ ಜಾತಿ ನಡುವೆ ವಿಷ ಬೀಜ ಬಿತ್ತಲು ಹೊರಟಿದ್ದಾರೆ.ಇದರಿಂದ ಏನು ಸಾಧನೆ ಮಾಡುತ್ತಾರೆ? ಸಮಾಜ ಹೊಡೆಯಲು ಮಾಡುತ್ತಾರೋ? ಸಮಾಜದಲ್ಲಿ ವಿಶ್ವಾಸಕ್ಕೆ ಧಕ್ಕೆ ತರಲು ಮಾಡುತ್ತಾರೋ ? ಒಗ್ಗಟ್ಟು ತರಲು ಮಾಡುತ್ತೀರೋ ಮೊದಲು ಅದನ್ನ ತಿಳಿಸಿ ಎಂದು ವಾಗ್ದಾಳಿ ನಡೆಸಿದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

19 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago