BREAKING NEWS

ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಹಿನ್ನಡೆ

ನವದೆಹಲಿ : ಕಾವೇರಿ ಜಲ ಹಂಚಿಕೆ ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕಕ್ಕೆ ನಿರಾಸೆಯಾಗಿದ್ದು, ತೀರ್ಪು ತಮಿಳು ನಾಡು ಪರವಾಗಿ ಬಂದಿದೆ.

ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳು ನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಿದೆ.

ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಸೂಚಿಸಿದೆ.

ನ್ಯಾಯಾಲಯ ಇಂದು ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭಿಸಿತು. ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ ತಮ್ಮ ವಾದವನ್ನು ಮಂಡಿಸಿದರು.

ಪ್ರಸ್ತುತ ನೀರಿನ ಸಂಕಷ್ಟ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ, ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಬಹಳಷ್ಟು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್​ ರೋಹಟಗಿ ವಾದ ಮಂಡನೆ ಮಾಡಿದರು.

ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್​ ದಿವಾನ್​, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು.

ವಾದ-ವಿವಾದಗಳನ್ನು ಆಲಿಸಿದ ಬಳಿಕ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿತು. ಇದರಿಂದ ಕರ್ನಾಟಕಕ್ಕೆ ಸುಪ್ರೀಂಕೋರ್ಟ್​ ನಲ್ಲೂ ಹಿನ್ನೆಡೆಯಾಗಿದೆ.

ತಮಿಳುನಾಡಿಗೆ ಸದ್ಯಕ್ಕೆ ಕರ್ನಾಟಕ 5,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸುವಂತೆ ಸುಪ್ರೀಂ ಕೋರ್ಟ್ ಪ್ರಾಧಿಕಾರಕ್ಕೆ ಸೂಚಿಸಿದೆ.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

37 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago