ಬೆಂಗಳೂರು : ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದರು.
ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಿ, ನಿಮ್ಮ ಸಮಸ್ಯೆ ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಅಂತ ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನು ಕೋರ್ಟ್ಗೆ ಸಲ್ಲಿಸಿ ಎಂದು ಸಲಹೆ ನೀಡಿದರು.
ಅಲ್ಲದೆ ತಮಿಳುನಾಡಿನ ಡ್ಯಾಂ ನೀರು ಮತ್ತು ಅವರು ಎಷ್ಟು ಎಕರೆಯಲ್ಲಿ ಕೃಷಿ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನ್ಯಾಯಾಲಯದ ಗಮನಕ್ಕೆ ತನ್ನಿ. ನದಿ ಹುಟ್ಟುವ ರಾಜ್ಯಕ್ಕೆ ಅಧಿಕಾರ ಜಾಸ್ತಿ. ಇದನ್ನು ಪ್ರತಿಪಾದಿಸಿ. ಕೋರ್ಟ್ನಲ್ಲಿ ಪ್ರಕರಣ ಇರುವಾಗ ಬಹಿರಂಗ ಹೇಳಿಕೆ ಕೊಡಬೇಡಿ. ಸಂಕಷ್ಟ ಸೂತ್ರಕ್ಕೆ ಒತ್ತಾಯಿಸಿ. ಮೇಕೆದಾಟು ಯೋಜನೆ ಬಗ್ಗೆ ಸುಪ್ರೀಂಕೋರ್ಟ್ಲ್ಲಿ ಒತ್ತಾಯ ಮಾಡಿ ಎಂದು ತಜ್ಞರು ಸಿಎಂಗೆ ಹೇಳಿದ್ದಾರೆ.
ಕಾವೇರಿ ವಿಚಾರದಲ್ಲಿ ನೀವು ರಾಜಕೀಯ ಫೈಟ್ ಮಾಡಿದರೇ ಜನರಿಗೆ ಉಳಿಗಾಲವಿಲ್ಲ. ಮೂರು ಪಕ್ಷಗಳ ನಾಯಕರು ಒಂದಾಗಿ ಹೋಗಿ. ವಿಪಕ್ಷಗಳು ಮತ್ತು ಸರ್ಕಾರದ ಕೆಲ ಸಚಿವರು ನೀರಾವರಿ ಅಂಕಿ ಅಂಶಗಳನ್ನು ಹೊರಗಡೆ ಹೇಳುವುದು ಬೇಡ ಎಂದು ನ್ಯಾಯಮೂರ್ತಿಗಳು ಹಾಗೂ ವಕೀಲರು ಸಲಹೆ ನೀಡಿದರು.
ನ್ಯಾಯಮೂರ್ತಿಗಳ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಮತ್ತು ಎಜಿ ಶಶಿಕಿರಣ್ ಶೆಟ್ಟಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದರು. ಸಭೆಯಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಯಿತು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…