BREAKING NEWS

ಕಾವೇರಿ ವಿವಾದ : ಮತ್ತೆ ಸುಪ್ರಿಂಕೋರ್ಟ್​​​ನಲ್ಲಿ ಅರ್ಜಿ ಸಲ್ಲಿಸಲು​ ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು : ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಿ, ನಿಮ್ಮ ಸಮಸ್ಯೆ ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಅಂತ ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನು ಕೋರ್ಟ್​ಗೆ ಸಲ್ಲಿಸಿ ಎಂದು ಸಲಹೆ ನೀಡಿದರು.

ಅಲ್ಲದೆ ತಮಿಳುನಾಡಿನ ಡ್ಯಾಂ ನೀರು ಮತ್ತು ಅವರು ಎಷ್ಟು ಎಕರೆಯಲ್ಲಿ ಕೃಷಿ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನ್ಯಾಯಾಲಯದ ಗಮನಕ್ಕೆ ತನ್ನಿ. ನದಿ ಹುಟ್ಟುವ ರಾಜ್ಯಕ್ಕೆ ಅಧಿಕಾರ ಜಾಸ್ತಿ. ಇದನ್ನು ಪ್ರತಿಪಾದಿಸಿ. ಕೋರ್ಟ್​ನಲ್ಲಿ ಪ್ರಕರಣ ಇರುವಾಗ ಬಹಿರಂಗ ಹೇಳಿಕೆ ಕೊಡಬೇಡಿ. ಸಂಕಷ್ಟ ಸೂತ್ರಕ್ಕೆ ಒತ್ತಾಯಿಸಿ. ಮೇಕೆದಾಟು ಯೋಜನೆ ಬಗ್ಗೆ ಸುಪ್ರೀಂಕೋರ್ಟ್​​ಲ್ಲಿ ಒತ್ತಾಯ ಮಾಡಿ ಎಂದು ತಜ್ಞರು ಸಿಎಂಗೆ ಹೇಳಿದ್ದಾರೆ.

ಕಾವೇರಿ ವಿಚಾರದಲ್ಲಿ ನೀವು ರಾಜಕೀಯ ಫೈಟ್ ಮಾಡಿದರೇ ಜನರಿಗೆ ಉಳಿಗಾಲವಿಲ್ಲ. ಮೂರು ಪಕ್ಷಗಳ ನಾಯಕರು ಒಂದಾಗಿ ಹೋಗಿ. ವಿಪಕ್ಷಗಳು ಮತ್ತು ಸರ್ಕಾರದ ಕೆಲ ಸಚಿವರು ನೀರಾವರಿ ಅಂಕಿ ಅಂಶಗಳನ್ನು ಹೊರಗಡೆ ಹೇಳುವುದು ಬೇಡ ಎಂದು ನ್ಯಾಯಮೂರ್ತಿಗಳು ಹಾಗೂ ವಕೀಲರು ಸಲಹೆ ನೀಡಿದರು.

ನ್ಯಾಯಮೂರ್ತಿಗಳ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಮತ್ತು ಎಜಿ ಶಶಿಕಿರಣ್ ಶೆಟ್ಟಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದರು. ಸಭೆಯಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಯಿತು.

 

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

11 hours ago