ನವದೆಹಲಿ : ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ದೆಹಲಿಯ ತಾಜ್ ಹೋಟೆಲ್ನಲ್ಲಿ ಸರ್ವಪಕ್ಷ ಸಂಸದರ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು ಕಾವೇರಿ ವಿಚಾರವಾಗಿ ಸಂಸತ್ ಅವೇಶನದಲ್ಲಿ ದನಿ ಎತ್ತುವುದಾಗಿ ಎಲ್ಲಾ ಸಂಸದರು ಭರವಸೆ ನೀಡಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಪರಿಸ್ಥಿತಿ ವಿವರಿಸುವುದಾಗಿ ಭರವಸೆ ನೀಡಿದ್ದಾರೆ.
ಮಳೆ ಕಡಿಮೆ ಬಿದ್ದಾಗ ನೀರನ್ನು ಎಷ್ಟು ಹಂಚಿಕೆ ಮಾಡಬೇಕು ಎನ್ನುವ ಬಗ್ಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸರಿಯಾದ ಸೂತ್ರ ಹಂಚಿಕೆ ಮಾಡಿಲ್ಲ. 5 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಎಂದು ಹೇಳಿರುವುದು ಅವೈಜ್ಞಾನಿಕ ಎಂದು ಹೇಳಿದರು.
ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆ ಅತ್ಯಂತ ಕಡಿಮೆ ಇದ್ದು, ಇದನ್ನು ಸುಪ್ರೀಂ ಕೋರ್ಟಿಗೆ ಮನವರಿಕೆ ಮಾಡುತ್ತೇವೆ. ಅಲ್ಲಿ ನಮಗೆ ನ್ಯಾಯ ಸಿಗುವ ಭರವೆಯಿದೆ. ಕಳೆದ 120 ವರ್ಷಗಳಲ್ಲಿ ಅತ್ಯಂತ ಕಷ್ಟದ ಸಂದರ್ಭವನ್ನು ಕರ್ನಾಟಕ ಎದುರಿಸುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಕಾರ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಗೆ ಆದೇಶ ನೀಡಿದ್ದು ಇಷ್ಟೆಲ್ಲಾ ಸಂಕಷ್ಟಗಳಿಗೆ ದಾರಿ ಮಾಡಿಕೊಟ್ಟಿದೆ.
ರಾಜ್ಯದ ನೆಲ- ಜಲದ ಸಂರಕ್ಷಣೆ ಸದಾ ಬೆನ್ನೆಲುಬಾಗಿ ನಾವು ನಿಲ್ಲುತ್ತೇವೆ ಎಂದು ಸಭೆಗೆ ಬಂದಿದ್ದಂತಹ ಬಿಜೆಪಿ, ಕಾಂಗ್ರೆಸ್, ಜನತದಳದ ಮತ್ತು ಪಕ್ಷೇತರ ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ಕರ್ನಾಟಕ ಸರ್ಕಾರ ಅಭಾರಿಯಾಗಿರುತ್ತದೆ ಎಂದು ಇದೇ ವೇಳೆ ಧನ್ಯವಾದಗಳನ್ನು ತಿಳಿಸಿದರು.
ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…
ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…
ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…
ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ…