BREAKING NEWS

ಕಾವೇರಿ ವಿಚಾರದಲ್ಲಿ ಸರ್ವಪಕ್ಷ ಸಂಸದರ ಬೆಂಬಲವಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ : ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ದೆಹಲಿಯ ತಾಜ್ ಹೋಟೆಲ್‍ನಲ್ಲಿ ಸರ್ವಪಕ್ಷ ಸಂಸದರ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು ಕಾವೇರಿ ವಿಚಾರವಾಗಿ ಸಂಸತ್ ಅವೇಶನದಲ್ಲಿ ದನಿ ಎತ್ತುವುದಾಗಿ ಎಲ್ಲಾ ಸಂಸದರು ಭರವಸೆ ನೀಡಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಪರಿಸ್ಥಿತಿ ವಿವರಿಸುವುದಾಗಿ ಭರವಸೆ ನೀಡಿದ್ದಾರೆ.

ಮಳೆ ಕಡಿಮೆ ಬಿದ್ದಾಗ ನೀರನ್ನು ಎಷ್ಟು ಹಂಚಿಕೆ ಮಾಡಬೇಕು ಎನ್ನುವ ಬಗ್ಗೆ ಕಾವೇರಿ ನೀರು ನಿರ್ವಹಣಾ ಸಮಿತಿ ಸರಿಯಾದ ಸೂತ್ರ ಹಂಚಿಕೆ ಮಾಡಿಲ್ಲ. 5 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಎಂದು ಹೇಳಿರುವುದು ಅವೈಜ್ಞಾನಿಕ ಎಂದು ಹೇಳಿದರು.

ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆ ಅತ್ಯಂತ ಕಡಿಮೆ ಇದ್ದು, ಇದನ್ನು ಸುಪ್ರೀಂ ಕೋರ್ಟಿಗೆ ಮನವರಿಕೆ ಮಾಡುತ್ತೇವೆ. ಅಲ್ಲಿ ನಮಗೆ ನ್ಯಾಯ ಸಿಗುವ ಭರವೆಯಿದೆ. ಕಳೆದ 120 ವರ್ಷಗಳಲ್ಲಿ ಅತ್ಯಂತ ಕಷ್ಟದ ಸಂದರ್ಭವನ್ನು ಕರ್ನಾಟಕ ಎದುರಿಸುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಕಾರ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಗೆ ಆದೇಶ ನೀಡಿದ್ದು ಇಷ್ಟೆಲ್ಲಾ ಸಂಕಷ್ಟಗಳಿಗೆ ದಾರಿ ಮಾಡಿಕೊಟ್ಟಿದೆ.

ರಾಜ್ಯದ ನೆಲ- ಜಲದ ಸಂರಕ್ಷಣೆ ಸದಾ ಬೆನ್ನೆಲುಬಾಗಿ ನಾವು ನಿಲ್ಲುತ್ತೇವೆ ಎಂದು ಸಭೆಗೆ ಬಂದಿದ್ದಂತಹ ಬಿಜೆಪಿ, ಕಾಂಗ್ರೆಸ್, ಜನತದಳದ ಮತ್ತು ಪಕ್ಷೇತರ ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ಕರ್ನಾಟಕ ಸರ್ಕಾರ ಅಭಾರಿಯಾಗಿರುತ್ತದೆ ಎಂದು ಇದೇ ವೇಳೆ ಧನ್ಯವಾದಗಳನ್ನು ತಿಳಿಸಿದರು.

andolanait

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

4 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

4 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

4 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

4 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

4 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

4 hours ago