Mysore
28
overcast clouds

Social Media

ಬುಧವಾರ, 17 ಜೂನ್ 2026
Light
Dark

ಮಂಡ್ಯದಲ್ಲಿ ಕಾವೇರಿಗಾಗಿ ಕಾವೇರಿದ ಪ್ರತಿಭಟನೆ

ಮಂಡ್ಯ : ಕರ್ನಾಟಕ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಹೆದ್ದಾರಿ ಬಂದ್ ಬದಲಾಗಿ ಮಂಡ್ಯ  ನಗರದ ಜೆಸಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜೆಸಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಚೆಂಡು ಹೂವು ಮುಡಿದು, ಹುರುಳಿ ಕಾಳು ಅಳೆಯುವುದರ ಮೂಲಕ ಕರ್ನಾಟಕ ಸರ್ಕಾರ ಮಂಡ್ಯ ಜಿಲ್ಲೆಯ ರೈತರಿಗೆ ಹುರಳಿ ತಿನ್ನಲು ಹೇಳುತ್ತಿದೆ ಹಾಗೂ ಕಿವಿಗೆ ಹೂವು ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕರ್ತರು ಮಂಡ್ಯ ಮೈಸೂರು ಹೆದ್ದಾರಿಗೆ ಇಳಿಯದಂತೆ ಜಿಲ್ಲಾ ಪೊಲೀಸ್ ಇಲಾಖೆಯು ಡಿಎಸ್ಪಿ ಶಿವಮೂರ್ತಿ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸತ್ತಲಾಗಿತ್ತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದಲ್ಲಿ ಸುತ್ತಲೂ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿಪಿ ಉಮೇಶ್ ಬೆಂಗಳೂರು ಸಂಸದ ಜಿಸಿ ಮೋಹನ್ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ ನಾರಾಯಣ ಮುಖಂಡರಾದ ಡಾ. ಸಿದ್ದರಾಮಯ್ಯ ಕೆ ಎಸ್ ನಂಜುಂಡೇಗೌಡ ಎಸ್ ಸಚ್ಚಿದಾನಂದ ಸಿಟಿ ಮಂಜು ಎನ್ ಎಸ್ ಇಂದ್ರೇಶ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!