BREAKING NEWS

ಕಾವೇರಿ ನದಿ ನೀರು ಹಂಚಿಕೆ ವಿವಾದ: ಪ್ರತ್ಯೇಕ ಪೀಠ ರಚನೆಗೆ ಒಪ್ಪಿದ ಸುಪ್ರೀಂ ಕೋರ್ಟ್‌

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿವಾದ ಪ್ರಕರಣದ ವಿಚಾರಣೆ ನಡೆಸಲು ಪ್ರತ್ಯೇಕ ಪೀಠ ರಚಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಒಪ್ಪಿದೆ. ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ ಬೆನ್ನಿಗೇ ಕರ್ನಾಟಕ ಕೂಡ ಅರ್ಜಿ ಸಲ್ಲಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ನೆರೆಯ ತಮಿಳುನಾಡು ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿಗೆ ಅಪೀಲು ಸಲ್ಲಿಸುವಂತೆ ರಾಜ್ಯದ ಅಡ್ವಕೇಟ್‌ ಜನರಲ್‌ ಅವರಿಗೆ ಕರ್ನಾಟಕ ಸಚಿವ ಸಂಪುಟ ಶನಿವಾರ ಸೂಚಿಸಿತ್ತು. ಕಳೆದ ವಾರ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ರಾಜ್ಯದ ಬೆಳೆಗಳಿಗೆ ನೀರುಣಿಸಲು ಸಹಾಯವಾಗಲು ಪ್ರತಿ ದಿನ 24,000 ಕ್ಯೂಸೆಕ್ಸ್‌ ನೀರು ಬಿಡುಗಡೆಗೊಳಿಸುವಂತೆ ಕರ್ನಾಟಕಕ್ಕೆ ಸೂಚಿಸಬೇಕೆಂದು ಕೋರಿತ್ತು.

ರಾಜ್ಯದ ಅಗತ್ಯತೆಗಳನ್ನು, ಅಂದರೆ ಕುಡಿಯುವ ಉದ್ದೇಶಕ್ಕೆ ಮತ್ತು ಕಾವೇರಿ ಸುತ್ತಲಿನ ಪ್ರದೇಶದಲ್ಲಿನ ಬೆಳೆಗಳಿಗೆ ನೀರುಣಿಸುವ ಅಗತ್ಯತೆಗಳನ್ನು ಪರಿಗಣಿಸಿ ನಂತರ ತಮಿಳುನಾಡಿಗೆ ನೀರು ಪೂರೈಸುವುದಾಗಿ ಕರ್ನಾಟಕ ಹೇಳಿದೆಯಲ್ಲದೆ ರಾಜ್ಯದಲ್ಲಿ ಮಳೆ ಕೊರತೆಯನ್ನೂ ಉಲ್ಲೇಖಿಸಿದೆ.

ಈ ಹಿನ್ನೆಲೆಯಲ್ಲಿ ವಿವಾದ ಸಂಬಂಧ ವಿಚಾರಣೆ ನಡೆಸಲು ಪೀಠ ರಚಿಸಲು ಸುಪ್ರೀಂ ಕೋರ್ಟ್‌ ಇಂದು ಒಪ್ಪಿದೆ.

ಜಲ ಸಂಪನ್ಮೂಲ ಸಚಿವಾಲಯವನ್ನು ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಳೆದ ವಾರ ಈ ವಿವಾದ ಕುರಿತು ಪ್ರತಿಕ್ರಿಯಿಸಿ, ಕರ್ನಾಟಕವು ತಮಿಳುನಾಡಿಗೆ 10,000 ಟಿಎಂಸಿ ಅಡಿ ನೀರು ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದರು.

ಆದರೆ ತನ್ನದೇ ಅಗತ್ಯತೆಗಳಿಗೆ ರಾಜ್ಯಕ್ಕೆ ನೀರಿನ ಕೊರತೆಯಿದೆ ಎಂದೂ ಅವರು ತಿಳಿಸಿದ್ದರು.

ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 10,000 ಕ್ಯೂಸೆಕ್ಸ್‌ ನೀರು ಬಿಡುಗಡೆಗೊಳಿಸಬೇಕೆಂಬ ತನ್ನ ಆದೇಶವನ್ನು ಪರಿಶೀಲಿಸುವಂತೆ ಕಾವೇರಿ ನದಿ ನೀರು‌ ನಿರ್ವಹಣಾ ಪ್ರಾಧಿಕಾರಕ್ಕೆ ಕರ್ನಾಟಕ ಸರ್ಕಾರ ಪತ್ರ ಬರೆದಿರುವ ಕುರಿತು ಶಿವಕುಮಾರ್‌ ಕಳೆದ ಶುಕ್ರವಾರ ಮಾಹಿತಿ ನೀಡಿದ್ದರು.

andolanait

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

1 hour ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

1 hour ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

1 hour ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

1 hour ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

2 hours ago