ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್ ಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೈ ಕೋರ್ಟ್ ಮೆಟ್ಟಿಲೇರಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕಂಡಿಸಿರುವ ಯತ್ನಾಳ್ ಹೈ ಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಹೈ ಕೋರ್ಟ್ ನ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಕಾನೂನು ಬಾಹೀರವಾಗಿದೆ. ಇದು ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ಸರ್ಕಾರ ನ್ಯಾಯಾಂಗದ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಯತ್ನ ನಡೆಸಿದೆ. ಹಾಗಾಗಿ ಸರ್ಕಾರದ ಈ ರೀತಿಯ ಕ್ರಮಕ್ಕೆ ಸೀಮಿತವಾಗಿ ಕೋರ್ಟ್ ತಮ್ಮ ವಾದವನ್ನು ಆಲಿಸಬೇಕು ಎಂದು ಯತ್ನಾಳ್ ಮನವಿ ಮಾಡಿಕೊಂಡಿದ್ದಾರೆ.
ಡಿಕೆ ಶಿವಕುಮಾರ್ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಇದರ ಬೆನ್ನಲ್ಲೇ ವಿಪಕ್ಷಗಳು ತೀವ್ರ ಆಕ್ರೋಶ ಹೊರ ಹಾಕಿದ್ದವು. ಬಿಜೆಪಿ ನಾಯಕ ಈಶ್ವರಪ್ಪ ಅವರು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ್ದರು. ಶಿವಕುಮಾರ್ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂತೆಗೆದುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ. 135 ಸೀಟ್ ಬಂದಿದೆ ಎಂದು ಮಾಡಬಾರದ ಕೆಲಸವನ್ನೆಲ್ಲಾ ಮಾಡುತ್ತಿದ್ದಾರೆ. 23 ಕೋಟಿ ಇದ್ದ ಡಿಕೆ ಶಿವಕುಮಾರ್ ಆದಾಯ ದಿಢೀರನೆ 163 ಕೋಟಿಗೆ ಏರಿಕೆಯಾಗಿದೆ. ಬಿಎಸ್ ವೈ ಸಿಎಂ ಆಗಿದ್ದಾಗ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು. ಆಗ ಡಿಕೆಶಿ ನ್ಯಾಯಾಲಯಕ್ಕೆ ಹೋದರೂ ಕೂಡ ಪ್ರಕರಣ ತಿರಸ್ಕಾರವಾಗಿತ್ತು. ಈಗ ಪ್ರಕರಣ ಅಂತಿಮ ಹಂತಕ್ಕೆ ಬಂದಿದೆ. ಇಂತಹ ಸಂದ್ಭದಲ್ಲಿ ಈ ರೀತಿ ಮಾಡುವುದು ಸರಿ ಅಲ್ಲ ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ. ಕೇಡಿ ಸಿದ್ದು ಅವರ ದರೋಡೆಕೋರರ ಗುಂಪು ದುರುಪಯೋಗಪಡಿಸಿಕೊಂಡಿದೆ ಎಂದು ಆಕ್ರೋಶ ಹೊರ ಹಾಕಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…