BREAKING NEWS

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್‌ : ಹೈ ಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್‌ ಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಕಂಡಿಸಿರುವ ಯತ್ನಾಳ್‌ ಹೈ ಕೋರ್ಟ್‌ ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಹೈ ಕೋರ್ಟ್‌ ನ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಕಾನೂನು ಬಾಹೀರವಾಗಿದೆ. ಇದು ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ಸರ್ಕಾರ ನ್ಯಾಯಾಂಗದ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಯತ್ನ ನಡೆಸಿದೆ. ಹಾಗಾಗಿ ಸರ್ಕಾರದ ಈ ರೀತಿಯ ಕ್ರಮಕ್ಕೆ ಸೀಮಿತವಾಗಿ ಕೋರ್ಟ್‌ ತಮ್ಮ ವಾದವನ್ನು ಆಲಿಸಬೇಕು ಎಂದು ಯತ್ನಾಳ್‌ ಮನವಿ ಮಾಡಿಕೊಂಡಿದ್ದಾರೆ.

ಡಿಕೆ ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಇದರ ಬೆನ್ನಲ್ಲೇ ವಿಪಕ್ಷಗಳು ತೀವ್ರ ಆಕ್ರೋಶ ಹೊರ ಹಾಕಿದ್ದವು. ಬಿಜೆಪಿ ನಾಯಕ ಈಶ್ವರಪ್ಪ ಅವರು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ್ದರು. ಶಿವಕುಮಾರ್‌ ಅವರ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಚಿವ ಸಂಪುಟ ಹಿಂತೆಗೆದುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅವಮಾನ. ಕಳ್ಳ ಯಾವತ್ತಿದ್ದರೂ ಕಳ್ಳನೇ. 135 ಸೀಟ್‌ ಬಂದಿದೆ ಎಂದು ಮಾಡಬಾರದ ಕೆಲಸವನ್ನೆಲ್ಲಾ ಮಾಡುತ್ತಿದ್ದಾರೆ. 23 ಕೋಟಿ ಇದ್ದ ಡಿಕೆ ಶಿವಕುಮಾರ್‌ ಆದಾಯ ದಿಢೀರನೆ 163 ಕೋಟಿಗೆ ಏರಿಕೆಯಾಗಿದೆ. ಬಿಎಸ್ ವೈ ಸಿಎಂ ಆಗಿದ್ದಾಗ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿತ್ತು. ಆಗ ಡಿಕೆಶಿ ನ್ಯಾಯಾಲಯಕ್ಕೆ ಹೋದರೂ ಕೂಡ ಪ್ರಕರಣ ತಿರಸ್ಕಾರವಾಗಿತ್ತು. ಈಗ ಪ್ರಕರಣ ಅಂತಿಮ ಹಂತಕ್ಕೆ ಬಂದಿದೆ. ಇಂತಹ ಸಂದ್ಭದಲ್ಲಿ ಈ ರೀತಿ ಮಾಡುವುದು ಸರಿ ಅಲ್ಲ ಕೇಡಿ ಸಿದ್ದು ಸಚಿವ ಸಂಪುಟ ಕಳ್ಳರ ಗುಂಪಾಗಿದೆ. ಕೇಡಿ ಸಿದ್ದು ಅವರ ದರೋಡೆಕೋರರ ಗುಂಪು ದುರುಪಯೋಗಪಡಿಸಿಕೊಂಡಿದೆ ಎಂದು ಆಕ್ರೋಶ ಹೊರ ಹಾಕಿದ್ದರು.

lokesh

Recent Posts

ಅಪ್ರಾಪ್ತನಿಗೆ ದ್ವಿಚಕ್ರ ವಾಹನ ನೀಡಿದ ಪೋಷಕರಿಗೆ 30 ಸಾವಿರ ರೂ.ದಂಡ

ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ…

48 mins ago

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ ; ಭಾಗವತ್‌ ಕುರಿತು ಖರ್ಗೆ ವ್ಯಂಗ್ಯ

ಬೆಂಗಳೂರು : ಆರ್‌ಎಸ್‌ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ…

1 hour ago

ಚಿತ್ರಕೂಟ ; ಮಂದಾಕಿನಿ ನದಿ ಪ್ರವಾಹ ಭೀತಿ

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…

2 hours ago

ನೇಪಾಳ ಪ್ರವಾಹ ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…

2 hours ago

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ…

3 hours ago

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

6 hours ago