BREAKING NEWS

ಕೆಜಿ ಟೊಮೇಟೊಗೆ 80 ರೂ.ನಂತೆ ಮಾರಾಟ ಮಾಡಲು ನಿರ್ಧರಿಸಿದ ಕೇಂದ್ರ

ನವದೆಹಲಿ: ದೇಶದ ಹಲವೆಡೆ ಈಗಲೂ ಟೊಮೇಟೊ ಕೆಜಿಗೆ 160 ರೂ.ಗೆ ಪ್ರೀಮಿಯಂ ದರದಲ್ಲಿ ಮಾರಾಟವಾಗುತ್ತಿದ್ದು, ಭಾನುವಾರದಿಂದ (ಜುಲೈ 16) ಪ್ರತಿ ಕೆಜಿ ಟೊಮೇಟೊವನ್ನು 80 ರೂ.ಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹೇಳಿಕೆ ಪ್ರಕಾರ, ತನ್ನ ಮಧ್ಯಪ್ರವೇಶದಿಂದ ದೇಶದ ಹಲವಾರು ಸ್ಥಳಗಳಲ್ಲಿ ಪ್ರತಿ ಕೆಜಿಗೆ 90 ರೂ.ಗೆ ರಿಯಾಯಿತಿ ದರದಲ್ಲಿ ಟೊಮೇಟೊ ಮಾರಾಟ ಮಾಡಲಾಗುತ್ತಿದೆ. ಟೊಮೇಟೊ ಬೆಲೆಯಲ್ಲಿ ಕುಸಿತವಾಗಿದೆ ಎಂದು ತಿಳಿಸಿದೆ.

ದೇಶದ 500ಕ್ಕೂ ಹೆಚ್ಚು ಕಡೆಗಳಲ್ಲಿ ಬೆಲೆ ಏರಿಕೆ ಪರಿಸ್ಥಿತಿಯ ಮರು ಮೌಲ್ಯಮಾಪನ ನಡೆಸಿದ ನಂತರ, ಇಂದಿನಿಂದ (ಜು.16) ದೇಶದ ಹಲವೆಡೆ ಕೆಜಿ ಟೊಮೇಟೊವನ್ನು80 ರೂ.ನಂತೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸಹಕಾರ ಕ್ಷೇತ್ರದ ಎನ್ಎಎಫ್ಇಡಿ ಮತ್ತು ಎನ್‌ಸಿಸಿಎಫ್ ಮೂಲದ ದೆಹಲಿ, ನೋಯ್ಡಾ, ಲಖನೌ, ಕಾನ್ಪುರ, ವಾರಣಾಸಿ, ಪಾಟ್ನಾ, ಮುಜಾಫರ್‌ಪುರ ಮತ್ತು ಅರಾಹ್‌ ಸೇರಿದಂತೆ ಹಲವು ಕಡೆಗಳಲ್ಲಿ ಇಂದು ಟೊಮೆಟೊ ಮಾರಾಟ ಪ್ರಾರಂಭವಾಗಿದೆ ಎಂದು ತಿಳಿಸಿದೆ.

ಆಯಾ ಸ್ಥಳಗಲ್ಲಿನ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳನ್ನು ಅವಲಂಬಿಸಿ ಸೋಮವಾರದಿಂದ ಹೆಚ್ಚಿನ ನಗರಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ದೇಶದ ಹಲವೆಡೆ ಟೊಮೇಟೊ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಮತ್ತು ಕರ್ನಾಟಕದಿಂದ ಟೊಮೇಟೊ ಖರೀದಿ ಮಾಡುವಂತೆ ಕೇಂದ್ರ ಸರ್ಕಾರವು ಸಹಕಾರ ಕ್ಷೇತ್ರದ ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಸೂಚಿಸಿತ್ತು.

ದೆಹಲಿ-ಎನ್‌ಸಿಆರ್‌ನಾದ್ಯಂತ ಸರಿಸುಮಾರು 18,000 ಕೆಜಿ ಟೊಮೇಟೊಗಳನ್ನು ಮಾರಾಟ ಮಾಡಲಾಗಿದೆ ಎಂದು ಸಚಿವಾಲಯ ಶನಿವಾರ ತಿಳಿಸಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

2 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

6 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

6 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

6 hours ago