BREAKING NEWS

ಕೆಜಿ ಟೊಮೇಟೊಗೆ 80 ರೂ.ನಂತೆ ಮಾರಾಟ ಮಾಡಲು ನಿರ್ಧರಿಸಿದ ಕೇಂದ್ರ

ನವದೆಹಲಿ: ದೇಶದ ಹಲವೆಡೆ ಈಗಲೂ ಟೊಮೇಟೊ ಕೆಜಿಗೆ 160 ರೂ.ಗೆ ಪ್ರೀಮಿಯಂ ದರದಲ್ಲಿ ಮಾರಾಟವಾಗುತ್ತಿದ್ದು, ಭಾನುವಾರದಿಂದ (ಜುಲೈ 16) ಪ್ರತಿ ಕೆಜಿ ಟೊಮೇಟೊವನ್ನು 80 ರೂ.ಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹೇಳಿಕೆ ಪ್ರಕಾರ, ತನ್ನ ಮಧ್ಯಪ್ರವೇಶದಿಂದ ದೇಶದ ಹಲವಾರು ಸ್ಥಳಗಳಲ್ಲಿ ಪ್ರತಿ ಕೆಜಿಗೆ 90 ರೂ.ಗೆ ರಿಯಾಯಿತಿ ದರದಲ್ಲಿ ಟೊಮೇಟೊ ಮಾರಾಟ ಮಾಡಲಾಗುತ್ತಿದೆ. ಟೊಮೇಟೊ ಬೆಲೆಯಲ್ಲಿ ಕುಸಿತವಾಗಿದೆ ಎಂದು ತಿಳಿಸಿದೆ.

ದೇಶದ 500ಕ್ಕೂ ಹೆಚ್ಚು ಕಡೆಗಳಲ್ಲಿ ಬೆಲೆ ಏರಿಕೆ ಪರಿಸ್ಥಿತಿಯ ಮರು ಮೌಲ್ಯಮಾಪನ ನಡೆಸಿದ ನಂತರ, ಇಂದಿನಿಂದ (ಜು.16) ದೇಶದ ಹಲವೆಡೆ ಕೆಜಿ ಟೊಮೇಟೊವನ್ನು80 ರೂ.ನಂತೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸಹಕಾರ ಕ್ಷೇತ್ರದ ಎನ್ಎಎಫ್ಇಡಿ ಮತ್ತು ಎನ್‌ಸಿಸಿಎಫ್ ಮೂಲದ ದೆಹಲಿ, ನೋಯ್ಡಾ, ಲಖನೌ, ಕಾನ್ಪುರ, ವಾರಣಾಸಿ, ಪಾಟ್ನಾ, ಮುಜಾಫರ್‌ಪುರ ಮತ್ತು ಅರಾಹ್‌ ಸೇರಿದಂತೆ ಹಲವು ಕಡೆಗಳಲ್ಲಿ ಇಂದು ಟೊಮೆಟೊ ಮಾರಾಟ ಪ್ರಾರಂಭವಾಗಿದೆ ಎಂದು ತಿಳಿಸಿದೆ.

ಆಯಾ ಸ್ಥಳಗಲ್ಲಿನ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳನ್ನು ಅವಲಂಬಿಸಿ ಸೋಮವಾರದಿಂದ ಹೆಚ್ಚಿನ ನಗರಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ದೇಶದ ಹಲವೆಡೆ ಟೊಮೇಟೊ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಮತ್ತು ಕರ್ನಾಟಕದಿಂದ ಟೊಮೇಟೊ ಖರೀದಿ ಮಾಡುವಂತೆ ಕೇಂದ್ರ ಸರ್ಕಾರವು ಸಹಕಾರ ಕ್ಷೇತ್ರದ ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಸೂಚಿಸಿತ್ತು.

ದೆಹಲಿ-ಎನ್‌ಸಿಆರ್‌ನಾದ್ಯಂತ ಸರಿಸುಮಾರು 18,000 ಕೆಜಿ ಟೊಮೇಟೊಗಳನ್ನು ಮಾರಾಟ ಮಾಡಲಾಗಿದೆ ಎಂದು ಸಚಿವಾಲಯ ಶನಿವಾರ ತಿಳಿಸಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago