ಚೆನ್ನೈ: ನೀಟ್ ಕುರಿತಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ನೀಟ್ ನಿಂದ ಯಾವುದೇ ಪ್ರಯೋಜನ ಇಲ್ಲ. ನೀಟ್ ಹಾಗೂ ಪ್ರತಿಭೆ ನಡುವೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ನೀಟ್ ಕುರಿತಂತೆ ತನ್ನ ಪುತ್ರ ಹಾಗೂ ರಾಜ್ಯ ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗದುಕೊಂಡ ಒಂದು ದಿನದ ಬಳಿಕ ಸ್ಟಾಲಿನ್, ನೀಟ್ ಪ್ರಯೋಜನ ಶೂನ್ಯ ಎಂಬುದನ್ನು ಕೇಂದ್ರದ ಬಿಜೆಪಿ ಸರ್ಕಾರವೇ ಒಪ್ಪಿಕೊಂಡಿದೆ ಎಂದಿದ್ದಾರೆ. ‘ಎಕ್ಸ್’ ನಲ್ಲಿ ಸ್ಟಾಲಿನ್, ‘‘ನೀಟ್ ಪಿಜಿ ಕಟ್ ಆಫ್ ಅನ್ನು ಶೂನ್ಯಕ್ಕೆ ಇಳಿಸುವ ಮೂಲಕ ಅವರು ನೀಟ್ ನಲ್ಲಿ ಅರ್ಹತೆಗೆ ಅರ್ಥವಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ಈ ಪರೀಕ್ಷೆಯನ್ನು ಕೇವಲ ಕೋಚಿಂಗ್ ಸೆಂಟರ್ ಗಾಗಿ ಹಾಗೂ ಪರೀಕ್ಷೆ ಶುಲ್ಕ ಪಾವತಿಸುವುದಕ್ಕೆ ಮಾತ್ರ ನಡೆಸಲಾಗುತ್ತಿದೆ. ಇದಕ್ಕೆ ಹೆಚ್ಚಿನ ಅರ್ಹತೆ ಅಗತ್ಯವಿಲ್ಲ’’ ಎಂದಿದ್ದಾರೆ.
ಹಲವು ಅಮೂಲ್ಯ ಜೀವಗಳನ್ನು ಕಳೆದುಕೊಂಡ ಹೊರತಾಗಿಯೂ ಕೇಂದ್ರದ ಬಿಜೆಪಿ ಸರ್ಕಾರ ಹೃದಯ ಹೀನವಾಗಿದೆ. ಅದು ಈಗ ಇಂತಹ ಆದೇಶದೊಂದಿಗೆ ಬಂದಿದೆ. ನೀಟ್ ಎಂದು ಕರೆಯಲಾಗುವ ‘ಗಿಲ್ಲೋಟಿನ್’ (ಮನುಷ್ಯರನ್ನು ಕೊಲ್ಲುವ ಯಂತ್ರ)ನಲ್ಲಿ ವಿದ್ಯಾರ್ಥಿಗಳು ಸಾಯುವಂತೆ ಮಾಡಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರವನ್ನು ತೆಗೆದು ಹಾಕಬೇಕಾಗಿದೆ ಎಂದು ಅವರು ಹೇಳಿದ್ದಾರೆ.
2023ರ ಪಿಜಿ ನೀಟ್ ಕೌನ್ಸೆಲಿಂಗ್ ಗೆ ಅರ್ಹರಾಗಲು ಬೇಕಾಗುವ ಶೇಕಡವಾರು ಅಂಕವನ್ನು ಕೇಂದ್ರ ಸರಕಾರ ಶೂನ್ಯಕ್ಕೆ ಇಳಿಸಿರುವುದು ನೀಟ್ ನ ಪಿತೂರಿಯನ್ನು ಬಹಿರಂಗಪಡಿಸಿದೆ ಎಂದು ಉದಯನಿಧಿ ಸ್ಟಾಲಿನ್ ಬುಧವಾರ ಆರೋಪಿಸಿದ್ದರು.
ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…
ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…