ಚೆನ್ನೈ: ನೀಟ್ ಕುರಿತಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ನೀಟ್ ನಿಂದ ಯಾವುದೇ ಪ್ರಯೋಜನ ಇಲ್ಲ. ನೀಟ್ ಹಾಗೂ ಪ್ರತಿಭೆ ನಡುವೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ನೀಟ್ ಕುರಿತಂತೆ ತನ್ನ ಪುತ್ರ ಹಾಗೂ ರಾಜ್ಯ ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗದುಕೊಂಡ ಒಂದು ದಿನದ ಬಳಿಕ ಸ್ಟಾಲಿನ್, ನೀಟ್ ಪ್ರಯೋಜನ ಶೂನ್ಯ ಎಂಬುದನ್ನು ಕೇಂದ್ರದ ಬಿಜೆಪಿ ಸರ್ಕಾರವೇ ಒಪ್ಪಿಕೊಂಡಿದೆ ಎಂದಿದ್ದಾರೆ. ‘ಎಕ್ಸ್’ ನಲ್ಲಿ ಸ್ಟಾಲಿನ್, ‘‘ನೀಟ್ ಪಿಜಿ ಕಟ್ ಆಫ್ ಅನ್ನು ಶೂನ್ಯಕ್ಕೆ ಇಳಿಸುವ ಮೂಲಕ ಅವರು ನೀಟ್ ನಲ್ಲಿ ಅರ್ಹತೆಗೆ ಅರ್ಥವಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ಈ ಪರೀಕ್ಷೆಯನ್ನು ಕೇವಲ ಕೋಚಿಂಗ್ ಸೆಂಟರ್ ಗಾಗಿ ಹಾಗೂ ಪರೀಕ್ಷೆ ಶುಲ್ಕ ಪಾವತಿಸುವುದಕ್ಕೆ ಮಾತ್ರ ನಡೆಸಲಾಗುತ್ತಿದೆ. ಇದಕ್ಕೆ ಹೆಚ್ಚಿನ ಅರ್ಹತೆ ಅಗತ್ಯವಿಲ್ಲ’’ ಎಂದಿದ್ದಾರೆ.
ಹಲವು ಅಮೂಲ್ಯ ಜೀವಗಳನ್ನು ಕಳೆದುಕೊಂಡ ಹೊರತಾಗಿಯೂ ಕೇಂದ್ರದ ಬಿಜೆಪಿ ಸರ್ಕಾರ ಹೃದಯ ಹೀನವಾಗಿದೆ. ಅದು ಈಗ ಇಂತಹ ಆದೇಶದೊಂದಿಗೆ ಬಂದಿದೆ. ನೀಟ್ ಎಂದು ಕರೆಯಲಾಗುವ ‘ಗಿಲ್ಲೋಟಿನ್’ (ಮನುಷ್ಯರನ್ನು ಕೊಲ್ಲುವ ಯಂತ್ರ)ನಲ್ಲಿ ವಿದ್ಯಾರ್ಥಿಗಳು ಸಾಯುವಂತೆ ಮಾಡಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರವನ್ನು ತೆಗೆದು ಹಾಕಬೇಕಾಗಿದೆ ಎಂದು ಅವರು ಹೇಳಿದ್ದಾರೆ.
2023ರ ಪಿಜಿ ನೀಟ್ ಕೌನ್ಸೆಲಿಂಗ್ ಗೆ ಅರ್ಹರಾಗಲು ಬೇಕಾಗುವ ಶೇಕಡವಾರು ಅಂಕವನ್ನು ಕೇಂದ್ರ ಸರಕಾರ ಶೂನ್ಯಕ್ಕೆ ಇಳಿಸಿರುವುದು ನೀಟ್ ನ ಪಿತೂರಿಯನ್ನು ಬಹಿರಂಗಪಡಿಸಿದೆ ಎಂದು ಉದಯನಿಧಿ ಸ್ಟಾಲಿನ್ ಬುಧವಾರ ಆರೋಪಿಸಿದ್ದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…