BREAKING NEWS

ನೀಟ್ ಹಾಗೂ ಪ್ರತಿಭೆ ನಡುವೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಕೇಂದ್ರವೇ ಒಪ್ಪಿಕೊಂಡಿದೆ: ಸಿಎಂ ಸ್ಟಾಲಿನ್

ಚೆನ್ನೈ: ನೀಟ್ ಕುರಿತಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ನೀಟ್ ನಿಂದ ಯಾವುದೇ ಪ್ರಯೋಜನ ಇಲ್ಲ. ನೀಟ್ ಹಾಗೂ ಪ್ರತಿಭೆ ನಡುವೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ನೀಟ್ ಕುರಿತಂತೆ ತನ್ನ ಪುತ್ರ ಹಾಗೂ ರಾಜ್ಯ ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗದುಕೊಂಡ ಒಂದು ದಿನದ ಬಳಿಕ ಸ್ಟಾಲಿನ್, ನೀಟ್ ಪ್ರಯೋಜನ ಶೂನ್ಯ ಎಂಬುದನ್ನು ಕೇಂದ್ರದ ಬಿಜೆಪಿ ಸರ್ಕಾರವೇ ಒಪ್ಪಿಕೊಂಡಿದೆ ಎಂದಿದ್ದಾರೆ. ‘ಎಕ್ಸ್’ ನಲ್ಲಿ ಸ್ಟಾಲಿನ್, ‘‘ನೀಟ್ ಪಿಜಿ ಕಟ್ ಆಫ್ ಅನ್ನು ಶೂನ್ಯಕ್ಕೆ ಇಳಿಸುವ ಮೂಲಕ ಅವರು ನೀಟ್ ನಲ್ಲಿ ಅರ್ಹತೆಗೆ ಅರ್ಥವಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಈ ಪರೀಕ್ಷೆಯನ್ನು ಕೇವಲ ಕೋಚಿಂಗ್ ಸೆಂಟರ್ ಗಾಗಿ ಹಾಗೂ ಪರೀಕ್ಷೆ ಶುಲ್ಕ ಪಾವತಿಸುವುದಕ್ಕೆ ಮಾತ್ರ ನಡೆಸಲಾಗುತ್ತಿದೆ. ಇದಕ್ಕೆ ಹೆಚ್ಚಿನ ಅರ್ಹತೆ ಅಗತ್ಯವಿಲ್ಲ’’ ಎಂದಿದ್ದಾರೆ.

ಹಲವು ಅಮೂಲ್ಯ ಜೀವಗಳನ್ನು ಕಳೆದುಕೊಂಡ ಹೊರತಾಗಿಯೂ ಕೇಂದ್ರದ ಬಿಜೆಪಿ ಸರ್ಕಾರ ಹೃದಯ ಹೀನವಾಗಿದೆ. ಅದು ಈಗ ಇಂತಹ ಆದೇಶದೊಂದಿಗೆ ಬಂದಿದೆ. ನೀಟ್ ಎಂದು ಕರೆಯಲಾಗುವ ‘ಗಿಲ್ಲೋಟಿನ್’ (ಮನುಷ್ಯರನ್ನು ಕೊಲ್ಲುವ ಯಂತ್ರ)ನಲ್ಲಿ ವಿದ್ಯಾರ್ಥಿಗಳು ಸಾಯುವಂತೆ ಮಾಡಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರವನ್ನು ತೆಗೆದು ಹಾಕಬೇಕಾಗಿದೆ ಎಂದು ಅವರು ಹೇಳಿದ್ದಾರೆ.

2023ರ ಪಿಜಿ ನೀಟ್ ಕೌನ್ಸೆಲಿಂಗ್ ಗೆ ಅರ್ಹರಾಗಲು ಬೇಕಾಗುವ ಶೇಕಡವಾರು ಅಂಕವನ್ನು ಕೇಂದ್ರ ಸರಕಾರ ಶೂನ್ಯಕ್ಕೆ ಇಳಿಸಿರುವುದು ನೀಟ್ ನ ಪಿತೂರಿಯನ್ನು ಬಹಿರಂಗಪಡಿಸಿದೆ ಎಂದು ಉದಯನಿಧಿ ಸ್ಟಾಲಿನ್ ಬುಧವಾರ ಆರೋಪಿಸಿದ್ದರು.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago