ಚೆನ್ನೈ: ನೀಟ್ ಕುರಿತಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ನೀಟ್ ನಿಂದ ಯಾವುದೇ ಪ್ರಯೋಜನ ಇಲ್ಲ. ನೀಟ್ ಹಾಗೂ ಪ್ರತಿಭೆ ನಡುವೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ನೀಟ್ ಕುರಿತಂತೆ ತನ್ನ ಪುತ್ರ ಹಾಗೂ ರಾಜ್ಯ ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಅವರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗದುಕೊಂಡ ಒಂದು ದಿನದ ಬಳಿಕ ಸ್ಟಾಲಿನ್, ನೀಟ್ ಪ್ರಯೋಜನ ಶೂನ್ಯ ಎಂಬುದನ್ನು ಕೇಂದ್ರದ ಬಿಜೆಪಿ ಸರ್ಕಾರವೇ ಒಪ್ಪಿಕೊಂಡಿದೆ ಎಂದಿದ್ದಾರೆ. ‘ಎಕ್ಸ್’ ನಲ್ಲಿ ಸ್ಟಾಲಿನ್, ‘‘ನೀಟ್ ಪಿಜಿ ಕಟ್ ಆಫ್ ಅನ್ನು ಶೂನ್ಯಕ್ಕೆ ಇಳಿಸುವ ಮೂಲಕ ಅವರು ನೀಟ್ ನಲ್ಲಿ ಅರ್ಹತೆಗೆ ಅರ್ಥವಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ಈ ಪರೀಕ್ಷೆಯನ್ನು ಕೇವಲ ಕೋಚಿಂಗ್ ಸೆಂಟರ್ ಗಾಗಿ ಹಾಗೂ ಪರೀಕ್ಷೆ ಶುಲ್ಕ ಪಾವತಿಸುವುದಕ್ಕೆ ಮಾತ್ರ ನಡೆಸಲಾಗುತ್ತಿದೆ. ಇದಕ್ಕೆ ಹೆಚ್ಚಿನ ಅರ್ಹತೆ ಅಗತ್ಯವಿಲ್ಲ’’ ಎಂದಿದ್ದಾರೆ.
ಹಲವು ಅಮೂಲ್ಯ ಜೀವಗಳನ್ನು ಕಳೆದುಕೊಂಡ ಹೊರತಾಗಿಯೂ ಕೇಂದ್ರದ ಬಿಜೆಪಿ ಸರ್ಕಾರ ಹೃದಯ ಹೀನವಾಗಿದೆ. ಅದು ಈಗ ಇಂತಹ ಆದೇಶದೊಂದಿಗೆ ಬಂದಿದೆ. ನೀಟ್ ಎಂದು ಕರೆಯಲಾಗುವ ‘ಗಿಲ್ಲೋಟಿನ್’ (ಮನುಷ್ಯರನ್ನು ಕೊಲ್ಲುವ ಯಂತ್ರ)ನಲ್ಲಿ ವಿದ್ಯಾರ್ಥಿಗಳು ಸಾಯುವಂತೆ ಮಾಡಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರವನ್ನು ತೆಗೆದು ಹಾಕಬೇಕಾಗಿದೆ ಎಂದು ಅವರು ಹೇಳಿದ್ದಾರೆ.
2023ರ ಪಿಜಿ ನೀಟ್ ಕೌನ್ಸೆಲಿಂಗ್ ಗೆ ಅರ್ಹರಾಗಲು ಬೇಕಾಗುವ ಶೇಕಡವಾರು ಅಂಕವನ್ನು ಕೇಂದ್ರ ಸರಕಾರ ಶೂನ್ಯಕ್ಕೆ ಇಳಿಸಿರುವುದು ನೀಟ್ ನ ಪಿತೂರಿಯನ್ನು ಬಹಿರಂಗಪಡಿಸಿದೆ ಎಂದು ಉದಯನಿಧಿ ಸ್ಟಾಲಿನ್ ಬುಧವಾರ ಆರೋಪಿಸಿದ್ದರು.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…