BREAKING NEWS

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ 1 ರೂಪಾಯಿ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಹಾಗೂ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ದೊಡ್ಡದಾಗಿ ಹೇಳಿಕೊಂಡಿದ್ದರು. ಈ ನಿಟ್ಟಿನಲ್ಲಿ ಇಲ್ಲಿಯವರೆಗೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ ಎಂದರು.

ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ನಮ್ಮ ಸಚಿವರು ಸಂಬಂಧ ಪಟ್ಟವರನ್ನು ಭೇಟಿ ಮಾಡಿದ್ದು, ನಾನು ಕೂಡ ಭೇಟಿ ಮಾಡಿದ್ದೇನೆ. ಆದರೆ ಆರು ತಿಂಗಳು ಕಳೆದರೂ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಈ ವರ್ಷದ ಬಜೆಟ್‌ನಲ್ಲಿ ಹಣ ಮೀಸಲಿಡುವುದಾಗಿ ಮತ್ತು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಹಣವನ್ನು ಮೀಸಲಿಡುವುದಾಗಿ ಸಿಎಂ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯು ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾಗಿದೆ ಮತ್ತು ಇದು ಮಧ್ಯ ಕರ್ನಾಟಕದಲ್ಲಿ ಬರಪೀಡಿತ ಮತ್ತು ಒಣ ಭೂಮಿಯಲ್ಲಿ ಒಂದು ಲಕ್ಷ ಹೆಕ್ಟೇರ್ ಭೂಮಿಗೆ ನೀರುಣಿಸುವ ನಿರೀಕ್ಷೆಯಿದೆ. ಜೊತೆಗೆ, ಇದು ಕುಡಿಯುವ ನೀರಿನ ಯೋಜನೆಯಾಗಿದ್ದು, ಲಕ್ಷಾಂತರ ಜನರಿಗೆ ಪ್ರಯೋಜನವಾಗಲಿದೆ.

ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಹಿಂದಿನ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅದರಂತೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು.

ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳ ಅನುದಾನ ಘೋಷಿಸಿದ್ದಕ್ಕೆ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂತಸ ವ್ಯಕ್ತಪಡಿಸಿದ್ದರು. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅಭವಿಸಿದ್ದು, ಯೋಜನೆ ಸ್ಥಗಿತಗೊಂಡಿದೆ.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

14 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago