BREAKING NEWS

ಸ್ನೇಹಿತರ ಬೊಕ್ಕಸ ತುಂಬುವುದು ಕೇಂದ್ರ ಸರ್ಕಾರದ ಗುರಿ: ರಾಹುಲ್‌ ಗಾಂಧಿ ಟೀಕೆ

ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಹಣದುಬ್ಬರ ಮತ್ತು ನಿರುದ್ಯೋಗದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೂ ‘ಸೂಟ್-ಬೂಟ್’ ಸರ್ಕಾರದ ಗುರಿ ಸ್ನೇಹಿತರ ಬೊಕ್ಕಸ ತುಂಬುವುದಾಗಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ.

2016 ಮತ್ತು 2021ರ ನಡುವೆ ಬಡವರ ಆದಾಯ ಶೇ 50ರಷ್ಟು ಕಡಿಮೆಯಾಗಿದೆ. ಮಧ್ಯಮ ವರ್ಗದವರ ಆದಾಯ ಸುಮಾರು 10ರಷ್ಟು ಕುಸಿದಿದೆ ಹಾಗೂ ಶ್ರೀಮಂತರ ಆದಾಯ ಸುಮಾರು 40ರಷ್ಟು ಹೆಚ್ಚಾಗಿದೆ ಎಂದು ತೋರಿಸುವ ‘ಭಾರತದ ಗ್ರಾಹಕ ಆರ್ಥಿಕತೆ 360 ಸಮೀಕ್ಷೆ’ಯ ಆಧಾರದ ಮೇಲೆ ಕುಟುಂಬದ ತಲಾ ಆದಾಯದ ಬೆಳವಣಿಗೆಯ ಗ್ರಾಫ್ ಅನ್ನು ರಾಹುಲ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾರ್ಮಿಕರು ಮತ್ತು ಕಾರ್ಮಿಕರ ವೇತನದ ಬೆಳವಣಿಗೆ ದರದ ಬಗ್ಗೆ ಕಳವಳ ವ್ಯಕ್ತಪಡಿಸುವ ಲೇಖನ ಟ್ಯಾಗ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 2014-15ರಿಂದ 2021-22ರ ಅವಧಿಯಲ್ಲಿ ವೇತನ ಹೆಚ್ಚಳದ ಪ್ರಮಾಣ ಶೇ 0.9ರಷ್ಟು (ಕೃಷಿ ಕಾರ್ಮಿಕರಿಗೆ), ಶೇ 0.2ರಷ್ಟು (ಕಟ್ಟಡ ಕಾರ್ಮಿಕರಿಗೆ), ಶೇ 0.3ರಷ್ಟು (ಕೃಷಿಯೇತರ ಕಾರ್ಮಿಕರಿಗೆ) ಎಂದು ಟ್ವೀಟ್ ಮಾಡಿದ್ದಾರೆ.

‘ಕಳೆದ 5 ವರ್ಷಗಳಲ್ಲಿ ಅದಾನಿ ಸಂಪತ್ತು ಶೇಕಡ 1440ರಷ್ಟು ಹೆಚ್ಚಾಗಿದೆ. ಮಿತ್ರ್ ಕಾ ಸಾಥ್, ಮಿತ್ರ್ ಕಾ ವಿಕಾಸ್!’ ಎಂದು ರಮೇಶ್ ಹೇಳಿದ್ದಾರೆ.

ಬಂಡವಾಳಶಾಹಿ ಸ್ನೇಹಿತರ ಅನುಕೂಲಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ, ಈ ಆರೋಪವನ್ನು ಸರ್ಕಾರ ತಿರಸ್ಕರಿಸಿದೆ.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

25 mins ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

2 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

4 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

5 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

6 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

6 hours ago