ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ್ದಾರೆ.
ಹಣದುಬ್ಬರ ಮತ್ತು ನಿರುದ್ಯೋಗದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೂ ‘ಸೂಟ್-ಬೂಟ್’ ಸರ್ಕಾರದ ಗುರಿ ಸ್ನೇಹಿತರ ಬೊಕ್ಕಸ ತುಂಬುವುದಾಗಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಾರೆ.
2016 ಮತ್ತು 2021ರ ನಡುವೆ ಬಡವರ ಆದಾಯ ಶೇ 50ರಷ್ಟು ಕಡಿಮೆಯಾಗಿದೆ. ಮಧ್ಯಮ ವರ್ಗದವರ ಆದಾಯ ಸುಮಾರು 10ರಷ್ಟು ಕುಸಿದಿದೆ ಹಾಗೂ ಶ್ರೀಮಂತರ ಆದಾಯ ಸುಮಾರು 40ರಷ್ಟು ಹೆಚ್ಚಾಗಿದೆ ಎಂದು ತೋರಿಸುವ ‘ಭಾರತದ ಗ್ರಾಹಕ ಆರ್ಥಿಕತೆ 360 ಸಮೀಕ್ಷೆ’ಯ ಆಧಾರದ ಮೇಲೆ ಕುಟುಂಬದ ತಲಾ ಆದಾಯದ ಬೆಳವಣಿಗೆಯ ಗ್ರಾಫ್ ಅನ್ನು ರಾಹುಲ್ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾರ್ಮಿಕರು ಮತ್ತು ಕಾರ್ಮಿಕರ ವೇತನದ ಬೆಳವಣಿಗೆ ದರದ ಬಗ್ಗೆ ಕಳವಳ ವ್ಯಕ್ತಪಡಿಸುವ ಲೇಖನ ಟ್ಯಾಗ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 2014-15ರಿಂದ 2021-22ರ ಅವಧಿಯಲ್ಲಿ ವೇತನ ಹೆಚ್ಚಳದ ಪ್ರಮಾಣ ಶೇ 0.9ರಷ್ಟು (ಕೃಷಿ ಕಾರ್ಮಿಕರಿಗೆ), ಶೇ 0.2ರಷ್ಟು (ಕಟ್ಟಡ ಕಾರ್ಮಿಕರಿಗೆ), ಶೇ 0.3ರಷ್ಟು (ಕೃಷಿಯೇತರ ಕಾರ್ಮಿಕರಿಗೆ) ಎಂದು ಟ್ವೀಟ್ ಮಾಡಿದ್ದಾರೆ.
‘ಕಳೆದ 5 ವರ್ಷಗಳಲ್ಲಿ ಅದಾನಿ ಸಂಪತ್ತು ಶೇಕಡ 1440ರಷ್ಟು ಹೆಚ್ಚಾಗಿದೆ. ಮಿತ್ರ್ ಕಾ ಸಾಥ್, ಮಿತ್ರ್ ಕಾ ವಿಕಾಸ್!’ ಎಂದು ರಮೇಶ್ ಹೇಳಿದ್ದಾರೆ.
ಬಂಡವಾಳಶಾಹಿ ಸ್ನೇಹಿತರ ಅನುಕೂಲಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ, ಈ ಆರೋಪವನ್ನು ಸರ್ಕಾರ ತಿರಸ್ಕರಿಸಿದೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…