ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ್ದಾರೆ.
ಹಣದುಬ್ಬರ ಮತ್ತು ನಿರುದ್ಯೋಗದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೂ ‘ಸೂಟ್-ಬೂಟ್’ ಸರ್ಕಾರದ ಗುರಿ ಸ್ನೇಹಿತರ ಬೊಕ್ಕಸ ತುಂಬುವುದಾಗಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದಾರೆ.
2016 ಮತ್ತು 2021ರ ನಡುವೆ ಬಡವರ ಆದಾಯ ಶೇ 50ರಷ್ಟು ಕಡಿಮೆಯಾಗಿದೆ. ಮಧ್ಯಮ ವರ್ಗದವರ ಆದಾಯ ಸುಮಾರು 10ರಷ್ಟು ಕುಸಿದಿದೆ ಹಾಗೂ ಶ್ರೀಮಂತರ ಆದಾಯ ಸುಮಾರು 40ರಷ್ಟು ಹೆಚ್ಚಾಗಿದೆ ಎಂದು ತೋರಿಸುವ ‘ಭಾರತದ ಗ್ರಾಹಕ ಆರ್ಥಿಕತೆ 360 ಸಮೀಕ್ಷೆ’ಯ ಆಧಾರದ ಮೇಲೆ ಕುಟುಂಬದ ತಲಾ ಆದಾಯದ ಬೆಳವಣಿಗೆಯ ಗ್ರಾಫ್ ಅನ್ನು ರಾಹುಲ್ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾರ್ಮಿಕರು ಮತ್ತು ಕಾರ್ಮಿಕರ ವೇತನದ ಬೆಳವಣಿಗೆ ದರದ ಬಗ್ಗೆ ಕಳವಳ ವ್ಯಕ್ತಪಡಿಸುವ ಲೇಖನ ಟ್ಯಾಗ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 2014-15ರಿಂದ 2021-22ರ ಅವಧಿಯಲ್ಲಿ ವೇತನ ಹೆಚ್ಚಳದ ಪ್ರಮಾಣ ಶೇ 0.9ರಷ್ಟು (ಕೃಷಿ ಕಾರ್ಮಿಕರಿಗೆ), ಶೇ 0.2ರಷ್ಟು (ಕಟ್ಟಡ ಕಾರ್ಮಿಕರಿಗೆ), ಶೇ 0.3ರಷ್ಟು (ಕೃಷಿಯೇತರ ಕಾರ್ಮಿಕರಿಗೆ) ಎಂದು ಟ್ವೀಟ್ ಮಾಡಿದ್ದಾರೆ.
‘ಕಳೆದ 5 ವರ್ಷಗಳಲ್ಲಿ ಅದಾನಿ ಸಂಪತ್ತು ಶೇಕಡ 1440ರಷ್ಟು ಹೆಚ್ಚಾಗಿದೆ. ಮಿತ್ರ್ ಕಾ ಸಾಥ್, ಮಿತ್ರ್ ಕಾ ವಿಕಾಸ್!’ ಎಂದು ರಮೇಶ್ ಹೇಳಿದ್ದಾರೆ.
ಬಂಡವಾಳಶಾಹಿ ಸ್ನೇಹಿತರ ಅನುಕೂಲಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ, ಈ ಆರೋಪವನ್ನು ಸರ್ಕಾರ ತಿರಸ್ಕರಿಸಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…