BREAKING NEWS

ಸ್ನೇಹಿತರ ಬೊಕ್ಕಸ ತುಂಬುವುದು ಕೇಂದ್ರ ಸರ್ಕಾರದ ಗುರಿ: ರಾಹುಲ್‌ ಗಾಂಧಿ ಟೀಕೆ

ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ್ದಾರೆ.

ಹಣದುಬ್ಬರ ಮತ್ತು ನಿರುದ್ಯೋಗದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೂ ‘ಸೂಟ್-ಬೂಟ್’ ಸರ್ಕಾರದ ಗುರಿ ಸ್ನೇಹಿತರ ಬೊಕ್ಕಸ ತುಂಬುವುದಾಗಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ.

2016 ಮತ್ತು 2021ರ ನಡುವೆ ಬಡವರ ಆದಾಯ ಶೇ 50ರಷ್ಟು ಕಡಿಮೆಯಾಗಿದೆ. ಮಧ್ಯಮ ವರ್ಗದವರ ಆದಾಯ ಸುಮಾರು 10ರಷ್ಟು ಕುಸಿದಿದೆ ಹಾಗೂ ಶ್ರೀಮಂತರ ಆದಾಯ ಸುಮಾರು 40ರಷ್ಟು ಹೆಚ್ಚಾಗಿದೆ ಎಂದು ತೋರಿಸುವ ‘ಭಾರತದ ಗ್ರಾಹಕ ಆರ್ಥಿಕತೆ 360 ಸಮೀಕ್ಷೆ’ಯ ಆಧಾರದ ಮೇಲೆ ಕುಟುಂಬದ ತಲಾ ಆದಾಯದ ಬೆಳವಣಿಗೆಯ ಗ್ರಾಫ್ ಅನ್ನು ರಾಹುಲ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾರ್ಮಿಕರು ಮತ್ತು ಕಾರ್ಮಿಕರ ವೇತನದ ಬೆಳವಣಿಗೆ ದರದ ಬಗ್ಗೆ ಕಳವಳ ವ್ಯಕ್ತಪಡಿಸುವ ಲೇಖನ ಟ್ಯಾಗ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 2014-15ರಿಂದ 2021-22ರ ಅವಧಿಯಲ್ಲಿ ವೇತನ ಹೆಚ್ಚಳದ ಪ್ರಮಾಣ ಶೇ 0.9ರಷ್ಟು (ಕೃಷಿ ಕಾರ್ಮಿಕರಿಗೆ), ಶೇ 0.2ರಷ್ಟು (ಕಟ್ಟಡ ಕಾರ್ಮಿಕರಿಗೆ), ಶೇ 0.3ರಷ್ಟು (ಕೃಷಿಯೇತರ ಕಾರ್ಮಿಕರಿಗೆ) ಎಂದು ಟ್ವೀಟ್ ಮಾಡಿದ್ದಾರೆ.

‘ಕಳೆದ 5 ವರ್ಷಗಳಲ್ಲಿ ಅದಾನಿ ಸಂಪತ್ತು ಶೇಕಡ 1440ರಷ್ಟು ಹೆಚ್ಚಾಗಿದೆ. ಮಿತ್ರ್ ಕಾ ಸಾಥ್, ಮಿತ್ರ್ ಕಾ ವಿಕಾಸ್!’ ಎಂದು ರಮೇಶ್ ಹೇಳಿದ್ದಾರೆ.

ಬಂಡವಾಳಶಾಹಿ ಸ್ನೇಹಿತರ ಅನುಕೂಲಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ, ಈ ಆರೋಪವನ್ನು ಸರ್ಕಾರ ತಿರಸ್ಕರಿಸಿದೆ.

andolanait

Recent Posts

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

2 mins ago

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago