ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೋವಿಡ್ ಗೈಡ್ಲೈನ್ಸ್ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್ಟಿಪಿಸಿಆರ್, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.
ಐಎಲ್ಐ, ಸ್ಯಾರಿ ಕೇಸ್ಗಳ ಮೇಲೆ ನಿಗಾ ವಹಿಸಬೇಕು, ಕೊವಿಡ್ ಚಿಕಿತ್ಸೆ ಬೇಕಾದ ಮೂಲ ಸೌಕರ್ಯ ಕ್ರೋಢೀಕರಣ ಮಾಡಬೇಕು. ಕೋವಿಡ್ ರೂಲ್ಸ್ಗಳನ್ನು ಸ್ಥಳೀಯವಾಗಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಆರ್ಟಿಪಿಸಿಆರ್ ಪಾಸಿಟಿವ್ ಬಂದರೆ ಜೆನೆಮಿಕ್ ಸೀಕ್ವೆನ್ಸ್ಗೆ ಸ್ಯಾಂಪಲ್ ಕಳಿಸಬೇಕು. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರಗಳ ಹೊಣೆಯನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದೆ.





