BREAKING NEWS

ಸಿಇಟಿ: ಮಾಹಿತಿ ತಿದ್ದುಪಡಿಗೆ 15ರವರೆಗೆ ಅವಕಾಶ

ಬೆಂಗಳೂರು : ಈ ವರ್ಷದ ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಹತೆಗೆ ಅನುಗುಣವಾಗಿ ಸಮರ್ಪಕ ಮಾಹಿತಿ ತಿದ್ದುಪಡಿಗೆ ಏಪ್ರಿಲ್‌ 15ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳು ತಮ್ಮ ಪ್ರವರ್ಗ ಮೀಸಲಾತಿ, ವಾರ್ಷಿಕ ಆದಾಯ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ, ವಿಶೇಷ ಕ್ಯಾಟಗರಿ ಇತ್ಯಾದಿಗಳನ್ನು ಸರಿಯಾಗಿ ತುಂಬಲು ಇದರಿಂದ ಅವಕಾಶವಾಗಲಿದೆ. ತಿದ್ದುಪಡಿ ಮಾಡಿದ ಬಳಿಕ, ‘ಡಿಕ್ಲರೇಷನ್‌ ಬಟನ್‌’ ಆಯ್ಕೆ ಮಾಡಿಕೊಂಡು, ನಂತರವಷ್ಟೇ ‘ಫೈನಲ್‌ ಸಬ್‌ಮಿಶನ್‌’ ಸಲ್ಲಿಸಿ, ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ತಿದ್ದುಪಡಿ ಮಾಡಿದ ಅರ್ಜಿಯ ಮುದ್ರಿತ ಪ್ರತಿಯನ್ನು ವಿದ್ಯಾರ್ಥಿಗಳು ತಮ್ಮ ಸುರಕ್ಷತೆಗಾಗಿ ಇಟ್ಟಕೊಳ್ಳಬೇಕು. ಇಲ್ಲದೆ ಹೋದರೆ, ಮೊದಲು ಸಲ್ಲಿಸಿದ್ದ ಅರ್ಜಿಯನ್ನೇ ಮುಂದಿನ ಹಂತಗಳಿಗೆ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.

ಇದರಲ್ಲಿ ಅಭ್ಯರ್ಥಿಯ ಹೆಸರು, ತಂದೆ-ತಾಯಿಯ ಹೆಸರು, ಜನ್ಮ ದಿನಾಂಕ ಇತ್ಯಾದಿಗಳ ಬದಲಾವಣೆಗೆ ಅವಕಾಶ ಇರುವುದಿಲ್ಲ. ಇದರಲ್ಲೇನಾದರೂ ಬದಲಾವಣೆಗಳಿದ್ದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಲಿಯನ್ನು ಸಂಪರ್ಕಿಸಬೇಕು. ಆದರೆ ಸಿಬಿಎಸ್‌ಇ/ಸಿಐಎಸ್‌ಸಿಇ ಪಠ್ಯಕ್ರಮಗಳಲ್ಲಿ 10ನೇ ತರಗತಿ ಓದಿರುವವರು ಈ ವಿವರಗಳನ್ನು ತಮ್ಮ ಅರ್ಜಿಯಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಜೊತೆಗೆ, ರಾಷ್ಟ್ರೀಯತೆಯನ್ನು ತಿದ್ದುಪಡಿ ಮಾಡಿಕೊಳ್ಳಲು ಬಯಸುವ ಓಸಿಐ ಅಭ್ಯರ್ಥಿಗಳು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಹೆಸರಿನಲ್ಲಿ ನಿಗದಿತ ಮೊತ್ತದ ಡಿಮ್ಯಾಂಡ್‌ ಡ್ರಾಫ್ಟ್‌ ಪಡೆದುಕೊಂಡು, ಏಪ್ರಿಲ್‌ 13 ಮತ್ತು 15ರಂದು ನೇರವಾಗಿ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

6 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

19 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

20 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 day ago