BREAKING NEWS

2024ರ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ: ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು : ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ದಿನಾಂಕ ಪ್ರಕಟವಾಗಿದೆ. ಈ ಪರೀಕ್ಷೆಯು ಮುಂದಿನ ವರ್ಷದ ಏ.20 ಮತ್ತು 21 ರಂದು ನಡೆಯಲಿದೆ.

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25ರಲ್ಲಿ ಪ್ರವೇಶಾತಿ ಬಯಸುವವರಿಗೆ 2024 ರ ಏಪ್ರಿಲ್‌ 20 (ಶನಿವಾರ) ಮತ್ತು 21ರಂದು (ಭಾನುವಾರ) ಸಿಇಟಿ ಪರೀಕ್ಷೆ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 10ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್.ರಮ್ಯಾ ತಿಳಿಸಿದ್ದಾರೆ.

ಈ ಬಗ್ಗೆ ಇಂದು (ಶುಕ್ರವಾರ) ಪತ್ರಿಕಾ ಪ್ರಕಟಣೆ ನೀಡಿದ್ದು, ಏ.20ರ ಬೆಳಿಗ್ಗೆ 10.30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ ಗಣಿತ, 21ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ. ಹಾಗೆಯೇ, ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.19ರ ಶುಕ್ರವಾರದಂದು ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

ನ್ಯಾಚುರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಕೃಷಿ ಕೋರ್ಸುಗಳು, ಪಶು ಸಂಗೋಪನೆ, ಬಿ.ಎಸ್ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ‌ಕೋರ್ಸುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೂ ಈ ಸೂಚನೆ ಅನ್ವಯಿಸುತ್ತದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್‌.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ತಪ್ಪಿದಲ್ಲಿ, ಅಂಥವರು ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಬಿ.ಇ.ಗೆ ನೇರ ಪ್ರವೇಶ: ಎಂಜಿನಿಯರಿಂಗ್‌ ನ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಗೆ ಏ.18ರಂದು ಸಿಇಟಿ ನಡೆಸಲಾಗುವುದು. ಸದ್ಯದಲ್ಲೇ ಪೋರ್ಟಲ್‌ ತೆರೆಯಲಾಗುವುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಇದೇ ರೀತಿಯಲ್ಲಿ ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್‌, ಎಂ.ಆರ್ಕ್‌ ಕೋರ್ಸುಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18 ಮತ್ತು 19ರಂದು ಪಿಜಿಸಿಇಟಿ ನಡೆಸಲಾಗುವುದು. ಇವರಿಗೂ ಸಹ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಪೋರ್ಟಲ್‌ ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ.

ಶುಲ್ಕ ವಾಪಸ್:‌ 2023ರಲ್ಲಿ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಬಯಸಿ ನಂತರ ಸೀಟು ರದ್ದುಪಡಿಸಿಕೊಂಡಿರುವ ಅಥವಾ ಹೆಚ್ಚುವರಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಆ ಬಾಬ್ತಿನ ಮೊತ್ತವನ್ನು ಹಿಂದಿರುಗಿಸುತ್ತಿದೆ. ಇಂಥವರು ಡಿ.31ರೊಳಗೆ ಸರಿಯಾದ ವಿವರ ನಮೂದಿಸಬೇಕು ಎಂದು ಪ್ರಾಧಿಕಾರ ತಿಳಿಸಿದೆ.

andolanait

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

6 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

10 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

10 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

10 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

11 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

11 hours ago