ಚಾಮರಾಜನಗರ: ಜಿಲ್ಲಾ ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದರಿಂದ ಕೆರಳಿದ ಇದರಿಂದ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಕಿಡಿಕಾರಿದರು.
ಚಾಮರಾಜೇಶ್ವರ ದೇವಾಲಯದ ಮುಂಭಾಗ ನಿರ್ಮಿಸಿರುವ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಿಸಲು ಸಚಿವ ಸೋಮಣ್ಣ ವೇದಿಕೆ ಏರಿ ಕುಳಿತಿದ್ದರು. ಆಗ ಅಲ್ಲೇ ಇದ್ದ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ದೀಪಾಲಂಕಾರದ ಅವ್ಯವಸ್ಥೆ ಖಂಡಿಸಿ ಕಪ್ಪು ಬಾವುಟ ಪ್ರದರ್ಶಿಸಿದರು. ಬಳಿಕ, ಅಲ್ಲೇ ಇದ್ದ ಪೊಲೀಸರು ನಂಜುಂಡಸ್ವಾಮಿ ಅವರನ್ನು ಹೊರಕ್ಕೆ ಎಳೆದೊಯ್ದರು. ಇನ್ನು, ಅನಿರೀಕ್ಷಿತ ಘಟನೆಯಿಂದ ಕೆಂಡಾಮಂಡಲರಾದ ಸಚಿವ ಸೋಮಣ್ಣ, ಪೊಲೀಸರು ಏನು ಕತ್ತೆ ಕಾಯುತ್ತಿದ್ದೀರಾ, ಯಾವ ರೀತಿ ವ್ಯವಸ್ಥೆ ಮಾಡಿದ್ದೀರಾ ಎಂದು ಕಿಡಿಕಾರಿದರು.
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…