ಚಾಮರಾಜನಗರ: ಜಿಲ್ಲಾ ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದರಿಂದ ಕೆರಳಿದ ಇದರಿಂದ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಕಿಡಿಕಾರಿದರು.
ಚಾಮರಾಜೇಶ್ವರ ದೇವಾಲಯದ ಮುಂಭಾಗ ನಿರ್ಮಿಸಿರುವ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಿಸಲು ಸಚಿವ ಸೋಮಣ್ಣ ವೇದಿಕೆ ಏರಿ ಕುಳಿತಿದ್ದರು. ಆಗ ಅಲ್ಲೇ ಇದ್ದ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ದೀಪಾಲಂಕಾರದ ಅವ್ಯವಸ್ಥೆ ಖಂಡಿಸಿ ಕಪ್ಪು ಬಾವುಟ ಪ್ರದರ್ಶಿಸಿದರು. ಬಳಿಕ, ಅಲ್ಲೇ ಇದ್ದ ಪೊಲೀಸರು ನಂಜುಂಡಸ್ವಾಮಿ ಅವರನ್ನು ಹೊರಕ್ಕೆ ಎಳೆದೊಯ್ದರು. ಇನ್ನು, ಅನಿರೀಕ್ಷಿತ ಘಟನೆಯಿಂದ ಕೆಂಡಾಮಂಡಲರಾದ ಸಚಿವ ಸೋಮಣ್ಣ, ಪೊಲೀಸರು ಏನು ಕತ್ತೆ ಕಾಯುತ್ತಿದ್ದೀರಾ, ಯಾವ ರೀತಿ ವ್ಯವಸ್ಥೆ ಮಾಡಿದ್ದೀರಾ ಎಂದು ಕಿಡಿಕಾರಿದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…