ಬೆಂಗಳೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಬಂಧಿಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇನ್ನು ಈ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಈ ಬಗ್ಗೆ ಗೃಹ ಸಚಿವ ಡಾ ಜಿ ಪಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ಬಂದ ಮಾಹಿತಿ ಪ್ರಕಾರ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ ಎಂದು ಹೇಳಿದರು.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿರುವ ಬಗ್ಗೆ ಮಾಹಿತಿ ಇದೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದ್ದು, ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ. ಪೊಲೀಸರು ಸುಮೊಟೋ ಕೇಸ್ ದಾಖಲಿಸಿಲ್ಲ. ದೂರಿನ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನವಾಗಿದೆ. ಈ ಕೇಸ್ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…