ಕಳೆದ ಕೆಲ ದಿನಗಳ ಹಿಂದೆ ಹಿಂದೂಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹಣ ವಂಚನೆ ಆರೋಪದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ವಿಧಾನಸಭೆಯ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 4 ಕೋಟಿ ರೂಪಾಯಿ ವಂಚನೆ ಮಾಡಿದ್ದ ಆರೋಪದಡಿಯಲ್ಲಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬಂಧಿಸಿದ್ದರು.
ಸದ್ಯ ಚೈತ್ರಾ ಕುಂದಾಪುರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ನಾಲ್ಕು ದಿನಗಳ ಹಿಂದೆಯಷ್ಟೇ ಚೈತ್ರಾ ಕುಂದಾಪುರ ಹಾಗೂ ಆಕೆಯ ಸಹಚರರ ವಿರುದ್ಧ ದೋಷಾರೋಪ ಪಟ್ಟಿಯನ್ನ ಸಲ್ಲಿಸಲಾಗಿತ್ತು. ಈ ವಿದ್ಯಾಮಾನಗಳು ನಡೆದ ಬೆನ್ನಲ್ಲೇ ಇದೀಗ ಚೈತ್ರಾ ಕುಂದಾಪುರಗೆ ಮತ್ತೊಂದು ಹಿನ್ನಡೆ ಉಂಟಾಗಿದೆ.
ತಾನು ಇದ್ದ ಜೈಲಿನ ಬ್ಯಾರಕ್ನಲ್ಲಿದ್ದ ಇತರೆ ಖೈದಿಗಳ ಜತೆ ಚೈತ್ರಾ ಕುಂದಾಪುರ ಜಗಳ ಮಾಡಿಕೊಂಡಿದ್ದು ಹಲ್ಲೆಗೊಳಗಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ರಾಷ್ಟ್ರಗೀತೆ ವಿಚಾರವಾಗಿ ಚೈತ್ರಾ ಕುಂದಾಪುರ ಆಫ್ರಿಕಾ ಮೂಲದ ಮೂವರು ಮಹಿಳಾ ಖೈದಿಗಳ ಜತೆ ಮಾತಿನ ಚಕಮಕಿ ನಡೆಸಿದ್ದು ಈ ವೇಳೆ ಆ ಆಫ್ರಿಕಾ ಖೈದಿಗಳು ಚೈತ್ರಾ ಕುಂದಾಪುರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಚೈತ್ರಾ ಕುಂದಾಪುರ ಜೈಲಿನ ಪೊಲೀಸರಿಗೆ ದೂರು ನೀಡಿದ್ದು ವಿಚಾರಣೆ ನಡೆಸುವಂತೆ ಮನವಿಯನ್ನೂ ಸಹ ಮಾಡಿದ್ದಾರೆ ಎನ್ನಲಾಗಿದೆ.
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…
ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…
ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…
ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ ಮಡಿಕೇರಿ: ಕುಶಾಲನಗರದ ಬಹು…