ಕಳೆದ ಕೆಲ ದಿನಗಳ ಹಿಂದೆ ಹಿಂದೂಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹಣ ವಂಚನೆ ಆರೋಪದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ವಿಧಾನಸಭೆಯ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 4 ಕೋಟಿ ರೂಪಾಯಿ ವಂಚನೆ ಮಾಡಿದ್ದ ಆರೋಪದಡಿಯಲ್ಲಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬಂಧಿಸಿದ್ದರು.
ಸದ್ಯ ಚೈತ್ರಾ ಕುಂದಾಪುರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ನಾಲ್ಕು ದಿನಗಳ ಹಿಂದೆಯಷ್ಟೇ ಚೈತ್ರಾ ಕುಂದಾಪುರ ಹಾಗೂ ಆಕೆಯ ಸಹಚರರ ವಿರುದ್ಧ ದೋಷಾರೋಪ ಪಟ್ಟಿಯನ್ನ ಸಲ್ಲಿಸಲಾಗಿತ್ತು. ಈ ವಿದ್ಯಾಮಾನಗಳು ನಡೆದ ಬೆನ್ನಲ್ಲೇ ಇದೀಗ ಚೈತ್ರಾ ಕುಂದಾಪುರಗೆ ಮತ್ತೊಂದು ಹಿನ್ನಡೆ ಉಂಟಾಗಿದೆ.
ತಾನು ಇದ್ದ ಜೈಲಿನ ಬ್ಯಾರಕ್ನಲ್ಲಿದ್ದ ಇತರೆ ಖೈದಿಗಳ ಜತೆ ಚೈತ್ರಾ ಕುಂದಾಪುರ ಜಗಳ ಮಾಡಿಕೊಂಡಿದ್ದು ಹಲ್ಲೆಗೊಳಗಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ರಾಷ್ಟ್ರಗೀತೆ ವಿಚಾರವಾಗಿ ಚೈತ್ರಾ ಕುಂದಾಪುರ ಆಫ್ರಿಕಾ ಮೂಲದ ಮೂವರು ಮಹಿಳಾ ಖೈದಿಗಳ ಜತೆ ಮಾತಿನ ಚಕಮಕಿ ನಡೆಸಿದ್ದು ಈ ವೇಳೆ ಆ ಆಫ್ರಿಕಾ ಖೈದಿಗಳು ಚೈತ್ರಾ ಕುಂದಾಪುರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಚೈತ್ರಾ ಕುಂದಾಪುರ ಜೈಲಿನ ಪೊಲೀಸರಿಗೆ ದೂರು ನೀಡಿದ್ದು ವಿಚಾರಣೆ ನಡೆಸುವಂತೆ ಮನವಿಯನ್ನೂ ಸಹ ಮಾಡಿದ್ದಾರೆ ಎನ್ನಲಾಗಿದೆ.
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…