BREAKING NEWS

ಚೈತ್ರಾ ಕುಂದಾಪುರ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಿದ ಆಫ್ರಿಕಾ ಖೈದಿಗಳು

ಕಳೆದ ಕೆಲ ದಿನಗಳ ಹಿಂದೆ ಹಿಂದೂಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹಣ ವಂಚನೆ ಆರೋಪದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ವಿಧಾನಸಭೆಯ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 4 ಕೋಟಿ ರೂಪಾಯಿ ವಂಚನೆ ಮಾಡಿದ್ದ ಆರೋಪದಡಿಯಲ್ಲಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬಂಧಿಸಿದ್ದರು.

ಸದ್ಯ ಚೈತ್ರಾ ಕುಂದಾಪುರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ನಾಲ್ಕು ದಿನಗಳ ಹಿಂದೆಯಷ್ಟೇ ಚೈತ್ರಾ ಕುಂದಾಪುರ ಹಾಗೂ ಆಕೆಯ ಸಹಚರರ ವಿರುದ್ಧ ದೋಷಾರೋಪ ಪಟ್ಟಿಯನ್ನ ಸಲ್ಲಿಸಲಾಗಿತ್ತು. ಈ ವಿದ್ಯಾಮಾನಗಳು ನಡೆದ ಬೆನ್ನಲ್ಲೇ ಇದೀಗ ಚೈತ್ರಾ ಕುಂದಾಪುರಗೆ ಮತ್ತೊಂದು ಹಿನ್ನಡೆ ಉಂಟಾಗಿದೆ.

ತಾನು ಇದ್ದ ಜೈಲಿನ ಬ್ಯಾರಕ್‌ನಲ್ಲಿದ್ದ ಇತರೆ ಖೈದಿಗಳ ಜತೆ ಚೈತ್ರಾ ಕುಂದಾಪುರ ಜಗಳ ಮಾಡಿಕೊಂಡಿದ್ದು ಹಲ್ಲೆಗೊಳಗಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ರಾಷ್ಟ್ರಗೀತೆ ವಿಚಾರವಾಗಿ ಚೈತ್ರಾ ಕುಂದಾಪುರ ಆಫ್ರಿಕಾ ಮೂಲದ ಮೂವರು ಮಹಿಳಾ ಖೈದಿಗಳ ಜತೆ ಮಾತಿನ ಚಕಮಕಿ ನಡೆಸಿದ್ದು ಈ ವೇಳೆ ಆ ಆಫ್ರಿಕಾ ಖೈದಿಗಳು ಚೈತ್ರಾ ಕುಂದಾಪುರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಚೈತ್ರಾ ಕುಂದಾಪುರ ಜೈಲಿನ ಪೊಲೀಸರಿಗೆ ದೂರು ನೀಡಿದ್ದು ವಿಚಾರಣೆ ನಡೆಸುವಂತೆ ಮನವಿಯನ್ನೂ ಸಹ ಮಾಡಿದ್ದಾರೆ ಎನ್ನಲಾಗಿದೆ.

andolana

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

1 hour ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago