BREAKING NEWS

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಒಡಿಶಾದಲ್ಲಿ ಸಿಕ್ಕಿಬಿದ್ದ ಅಭಿನವ ಹಾಲಶ್ರೀ

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀಕೊನೆಗೆ ಸಿಕ್ಕಿಬಿದ್ದಿದ್ದಾರೆ. ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್​ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ.

ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ಚೈತ್ರಾ ಕುಂದಾಪುರ, ಗೋವಿಂದ್‌ ಬಾಬು ಎನ್ನುವವರಿಗೆ 5 ಕೋಟಿ ನಾಮ ಹಾಕಿದ್ದಳು. ಇದೇ ವಂಚನೆ ಕೇಸ್​ನಲ್ಲಿ ಈಗ ಕಂಬಿ ಹಿಂದೆ ಬಿದ್ದಿದ್ದಾಳೆ. ಸದ್ಯ ಸಿಸಿಬಿ ವಶದಲ್ಲಿರುವ ಚೈತ್ರ ಮಾಧ್ಯಮಗಳ ಮುಂದೆ ಸ್ವಾಮೀಜಿ ಅರೆಸ್ಟ್ ಆದ್ರೆ ದೊಡ್ಡವರ ಹೆಸರು ಬಯಲಾಗುತ್ತೆ ಎಂದು ಹೊಸ ಟ್ವಿಸ್ಟ್‌ ಕೊಟ್ಟಿದ್ದಳು. ಈ ಹಿನ್ನೆಲೆಯಲ್ಲಿ MLA ಟಿಕೆಟ್ ಡೀಲಿಂಗ್ ಹಿಂದೆ ಇರೋ ಆ ದೊಡ್ಡವರು ಯಾರು ಎನ್ನುವ ಕುತೂಹಲ ಮನೆ ಮಾಡಿತ್ತು.

ಇದೇ ಪ್ರಕರಣದಲ್ಲಿ ಎ3 ಆಗಿರುವ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಅಭಿನವ ಹಾಲಶ್ರೀ ಅಜ್ಞಾತ ಸ್ಥಳ ಸೇರಿದ್ದಾರೆ. ಹಾಲು ಮಠಕ್ಕೂ ಬಾರದ ಸ್ವಾಮೀಜಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ದೂರುದಾರ ಗೋವಿಂದ್ ಪೂಜಾರಿಯಿಂದ ಒಂದೂವರೆ ಕೋಟಿ ಪಡೆದಿದ್ದ ಸ್ವಾಮೀಜಿ ಇದೀಗ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ದು, ದೊಡ್ಡವರ ಹೆಸರು ಬಾಯಿಬಿಡುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಸ್ವಾಮೀಜಿಯ ಬಂಧನ ಭಾರೀ ಕುತೂಹಲ ಮೂಡಿಸಿದೆ.

ದೂರುದಾರ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ರೂ. ಪಡೆದಿದ್ದ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ಕಳೆದ ಕೆಲವು ತಿಂಗಳಲ್ಲಿ ಕೃಷಿ ಜಮೀನು ಖರೀದಿಸಿದ್ದರು. ಅಲ್ಲದೆ, ಪೆಟ್ರೋಲ್ ಬಂಕ್‌ನಲ್ಲಿ ಹೂಡಿಕೆ ಮಾಡಿದ್ದರು ಎಂಬುದು ಬೆಳಕಿಗೆ ಬಂದಿದೆ.

lokesh

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago