BREAKING NEWS

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಒಡಿಶಾದಲ್ಲಿ ಸಿಕ್ಕಿಬಿದ್ದ ಅಭಿನವ ಹಾಲಶ್ರೀ

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀಕೊನೆಗೆ ಸಿಕ್ಕಿಬಿದ್ದಿದ್ದಾರೆ. ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್​ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ.

ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ಚೈತ್ರಾ ಕುಂದಾಪುರ, ಗೋವಿಂದ್‌ ಬಾಬು ಎನ್ನುವವರಿಗೆ 5 ಕೋಟಿ ನಾಮ ಹಾಕಿದ್ದಳು. ಇದೇ ವಂಚನೆ ಕೇಸ್​ನಲ್ಲಿ ಈಗ ಕಂಬಿ ಹಿಂದೆ ಬಿದ್ದಿದ್ದಾಳೆ. ಸದ್ಯ ಸಿಸಿಬಿ ವಶದಲ್ಲಿರುವ ಚೈತ್ರ ಮಾಧ್ಯಮಗಳ ಮುಂದೆ ಸ್ವಾಮೀಜಿ ಅರೆಸ್ಟ್ ಆದ್ರೆ ದೊಡ್ಡವರ ಹೆಸರು ಬಯಲಾಗುತ್ತೆ ಎಂದು ಹೊಸ ಟ್ವಿಸ್ಟ್‌ ಕೊಟ್ಟಿದ್ದಳು. ಈ ಹಿನ್ನೆಲೆಯಲ್ಲಿ MLA ಟಿಕೆಟ್ ಡೀಲಿಂಗ್ ಹಿಂದೆ ಇರೋ ಆ ದೊಡ್ಡವರು ಯಾರು ಎನ್ನುವ ಕುತೂಹಲ ಮನೆ ಮಾಡಿತ್ತು.

ಇದೇ ಪ್ರಕರಣದಲ್ಲಿ ಎ3 ಆಗಿರುವ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಅಭಿನವ ಹಾಲಶ್ರೀ ಅಜ್ಞಾತ ಸ್ಥಳ ಸೇರಿದ್ದಾರೆ. ಹಾಲು ಮಠಕ್ಕೂ ಬಾರದ ಸ್ವಾಮೀಜಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ದೂರುದಾರ ಗೋವಿಂದ್ ಪೂಜಾರಿಯಿಂದ ಒಂದೂವರೆ ಕೋಟಿ ಪಡೆದಿದ್ದ ಸ್ವಾಮೀಜಿ ಇದೀಗ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ದು, ದೊಡ್ಡವರ ಹೆಸರು ಬಾಯಿಬಿಡುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಸ್ವಾಮೀಜಿಯ ಬಂಧನ ಭಾರೀ ಕುತೂಹಲ ಮೂಡಿಸಿದೆ.

ದೂರುದಾರ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ರೂ. ಪಡೆದಿದ್ದ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ಕಳೆದ ಕೆಲವು ತಿಂಗಳಲ್ಲಿ ಕೃಷಿ ಜಮೀನು ಖರೀದಿಸಿದ್ದರು. ಅಲ್ಲದೆ, ಪೆಟ್ರೋಲ್ ಬಂಕ್‌ನಲ್ಲಿ ಹೂಡಿಕೆ ಮಾಡಿದ್ದರು ಎಂಬುದು ಬೆಳಕಿಗೆ ಬಂದಿದೆ.

lokesh

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 mins ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

47 mins ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

1 hour ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

1 hour ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

2 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

2 hours ago