BREAKING NEWS

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಒಡಿಶಾದಲ್ಲಿ ಸಿಕ್ಕಿಬಿದ್ದ ಅಭಿನವ ಹಾಲಶ್ರೀ

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀಕೊನೆಗೆ ಸಿಕ್ಕಿಬಿದ್ದಿದ್ದಾರೆ. ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್​ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ. ಇನ್ನು ಚೈತ್ರಾ ಕುಂದಾಪುರ ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತರಾ ಎನ್ನುವ ಕುತೂಹಲ ಮೂಡಿಸಿದೆ.

ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ಚೈತ್ರಾ ಕುಂದಾಪುರ, ಗೋವಿಂದ್‌ ಬಾಬು ಎನ್ನುವವರಿಗೆ 5 ಕೋಟಿ ನಾಮ ಹಾಕಿದ್ದಳು. ಇದೇ ವಂಚನೆ ಕೇಸ್​ನಲ್ಲಿ ಈಗ ಕಂಬಿ ಹಿಂದೆ ಬಿದ್ದಿದ್ದಾಳೆ. ಸದ್ಯ ಸಿಸಿಬಿ ವಶದಲ್ಲಿರುವ ಚೈತ್ರ ಮಾಧ್ಯಮಗಳ ಮುಂದೆ ಸ್ವಾಮೀಜಿ ಅರೆಸ್ಟ್ ಆದ್ರೆ ದೊಡ್ಡವರ ಹೆಸರು ಬಯಲಾಗುತ್ತೆ ಎಂದು ಹೊಸ ಟ್ವಿಸ್ಟ್‌ ಕೊಟ್ಟಿದ್ದಳು. ಈ ಹಿನ್ನೆಲೆಯಲ್ಲಿ MLA ಟಿಕೆಟ್ ಡೀಲಿಂಗ್ ಹಿಂದೆ ಇರೋ ಆ ದೊಡ್ಡವರು ಯಾರು ಎನ್ನುವ ಕುತೂಹಲ ಮನೆ ಮಾಡಿತ್ತು.

ಇದೇ ಪ್ರಕರಣದಲ್ಲಿ ಎ3 ಆಗಿರುವ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠ ಅಭಿನವ ಹಾಲಶ್ರೀ ಅಜ್ಞಾತ ಸ್ಥಳ ಸೇರಿದ್ದಾರೆ. ಹಾಲು ಮಠಕ್ಕೂ ಬಾರದ ಸ್ವಾಮೀಜಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ದೂರುದಾರ ಗೋವಿಂದ್ ಪೂಜಾರಿಯಿಂದ ಒಂದೂವರೆ ಕೋಟಿ ಪಡೆದಿದ್ದ ಸ್ವಾಮೀಜಿ ಇದೀಗ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ದು, ದೊಡ್ಡವರ ಹೆಸರು ಬಾಯಿಬಿಡುವ ಸಾಧ್ಯತೆ ಇದೆ. ಹೀಗಾಗಿ ಇದೀಗ ಸ್ವಾಮೀಜಿಯ ಬಂಧನ ಭಾರೀ ಕುತೂಹಲ ಮೂಡಿಸಿದೆ.

ದೂರುದಾರ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ರೂ. ಪಡೆದಿದ್ದ ಹಗಡಲಿ ತಾಲೂಕಿನ ಹಿರೇಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ಕಳೆದ ಕೆಲವು ತಿಂಗಳಲ್ಲಿ ಕೃಷಿ ಜಮೀನು ಖರೀದಿಸಿದ್ದರು. ಅಲ್ಲದೆ, ಪೆಟ್ರೋಲ್ ಬಂಕ್‌ನಲ್ಲಿ ಹೂಡಿಕೆ ಮಾಡಿದ್ದರು ಎಂಬುದು ಬೆಳಕಿಗೆ ಬಂದಿದೆ.

lokesh

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

9 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

9 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

15 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago