BREAKING NEWS

ಭಾರತಕ್ಕೆ ಮತ್ತಷ್ಟು ಆತಂಕ ಸೃಷ್ಟಿ : ಕ್ಸಿ ಜಿನ್‌ಪಿಂಗ್ ಗೆಲುವು

ಹೊಸದಿಲ್ಲಿ: ಸತತ ಮೂರನೇ ಬಾರಿಗೆ ಚೀನಾ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆಯಾಗಿರುವುದು ಭಾರತ ಸೇರಿ ಅನೇಕ ರಾಷ್ಟ್ರಗಳ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಒಂದು ದಶಕದ ಅವಧಿಯಲ್ಲಿ ಚೀನಾದ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿರುವ ಜಿನ್‌ಪಿಂಗ್‌ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ಜಾಗತಿಕ ವ್ಯಾಪಾರ, ಭದ್ರತೆ, ಮಾನವ ಹಕ್ಕುಗಳ ವಿಚಾರದಲ್ಲಿ ಮುಂದೇನಾಗಲಿದೆಯೋ ಎಂಬ ಆತಂಕ ಸೃಷ್ಟಿಯಾಗಿದೆ.

ಚೀನಾದ ಆರ್ಥಿಕ ಶಕ್ತಿ ಬಳಸಿಕೊಂಡು ವಿದೇಶದಲ್ಲಿ ತನ್ನ ಪ್ರಭಾವ ಹೆಚ್ಚಿಸಲು ಜಿನ್‌ಪಿಂಗ್‌ ಪ್ರಯತ್ನ ಮಾಡುವ ಸಾಧ್ಯತೆ ಇದೆ. ಸಣ್ಣ ಪುಟ್ಟ ರಾಷ್ಟ್ರಗಳಿಗೆ ಆರ್ಥಿಕ ನೆರವು ನೀಡಿ ದೊಡ್ಡ ರಾಷ್ಟ್ರಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ಕಮ್ಯುನಿಸ್ಟ್‌ ನಾಯಕನ ತಂತ್ರಗಾರಿಕೆಯನ್ನು ಭಾರತ, ಅಮೇರಿಕ, ಸೇರಿ ಹಲವು ದೇಶಗಳು ವಿರೋಧಿಸಿವೆ. ಅಧಿಕಾರ ಆಸೆಯ ಮೂಲಕ ವಿಶ್ವಸಂಸ್ಥೆ ರೂಪಿಸಿರುವ ಮಾನವ ಹಕ್ಕುಗಳ ವ್ಯಾಖ್ಯಾನವನ್ನೇ ಬದಲಿಸಲು ಜಿನ್‌ಪಿಂಗ್‌ ಪ್ರಯತ್ನ ಮಾಡುತ್ತಾರೆಂದು ಅಮೆರಿಕ ಎಚ್ಚರಿಸಿದೆ.

ಭಾರತಕ್ಕೆ ಯಾವಾಗಲೂ ಸಮಸ್ಯೆ ಮಾಡುವುದಕ್ಕೆ ನೆರೆಯ ಪಾಕಿಸ್ತಾನಕ್ಕೆ ನೆರವು ನೀಡುವುದು. ಮಿಲಿಟರಿ ಹಾಗೂ ಆರ್ಥಿಕ ಸಹಾಯ ಮಾಡುವ ಮೂಲಕ ಪಾಕಿಸ್ತಾನವನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ.

ಜಿನ್‌ಪಿಂಗ್ ಅವರು ಮೂರನೇ ಅವಧಿಗೆ ಆಯ್ಕೆಯಾದ ವೇಳೆಯೇ, ಭಾರತದ ಗಡಿಯಲ್ಲಿ ವೆಸ್ಟರ್ನ್ ಥಿಯೇಟರ್ ಕಮಾಂಡ್ ಅನ್ನು ಮುನ್ನಡೆಸುತ್ತಿದ್ದ ಮೂವರು ಜನರಲ್‌ಗಳಿಗೆ ಬಡ್ತಿ ನೀಡಿದ್ದಾರೆ.

ಜಿನ್‌ಪಿಂಗ್‌ ಅವಧಿಯಲ್ಲಿ ಟಿಬೆಟ್‌ ಮೇಲೆ ಪ್ರಭುತ್ವ ಸಾಧಿಸಲು ಗಡಿಯಲ್ಲಿ ಭಾರತಕ್ಕೆ ಸಮಸ್ಯೆ ಮಾಡಲಾಗಿತ್ತು. ಬೌದ್ಧ ಧರ್ಮಗುರು ದಲೈ ಲಾಮಾಗೆ ರಕ್ಷಣೆ ನೀಡಿರುವ ಭಾರತವನ್ನು ಟಿಬೆಟ್‌ ವ್ಯವಹಾರದಿಂದ ದೂರ ಇಡಲು 2017ರಲ್ಲಿ ಡೋಕ್ಲಾಮ್‌ ಗಡಿಯಲ್ಲಿ ಶುರು ಮಾಡಿದ ಸಮಸ್ಯೆ 2020ರಲ್ಲಿ ಲಡಾಕ್‌ನಲ್ಲಿ ನಡೆದ ಸಂಘರ್ಷದವರೆಗೂ ಬೆಳೆದಿದ್ದನ್ನು ಗಮನಿಸಬಹುದಾಗಿದೆ.

 

andolana

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

8 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

9 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

9 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

10 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

11 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

12 hours ago