BREAKING NEWS

ಭಾರತಕ್ಕೆ ಮತ್ತಷ್ಟು ಆತಂಕ ಸೃಷ್ಟಿ : ಕ್ಸಿ ಜಿನ್‌ಪಿಂಗ್ ಗೆಲುವು

ಹೊಸದಿಲ್ಲಿ: ಸತತ ಮೂರನೇ ಬಾರಿಗೆ ಚೀನಾ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆಯಾಗಿರುವುದು ಭಾರತ ಸೇರಿ ಅನೇಕ ರಾಷ್ಟ್ರಗಳ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಒಂದು ದಶಕದ ಅವಧಿಯಲ್ಲಿ ಚೀನಾದ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿರುವ ಜಿನ್‌ಪಿಂಗ್‌ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ಜಾಗತಿಕ ವ್ಯಾಪಾರ, ಭದ್ರತೆ, ಮಾನವ ಹಕ್ಕುಗಳ ವಿಚಾರದಲ್ಲಿ ಮುಂದೇನಾಗಲಿದೆಯೋ ಎಂಬ ಆತಂಕ ಸೃಷ್ಟಿಯಾಗಿದೆ.

ಚೀನಾದ ಆರ್ಥಿಕ ಶಕ್ತಿ ಬಳಸಿಕೊಂಡು ವಿದೇಶದಲ್ಲಿ ತನ್ನ ಪ್ರಭಾವ ಹೆಚ್ಚಿಸಲು ಜಿನ್‌ಪಿಂಗ್‌ ಪ್ರಯತ್ನ ಮಾಡುವ ಸಾಧ್ಯತೆ ಇದೆ. ಸಣ್ಣ ಪುಟ್ಟ ರಾಷ್ಟ್ರಗಳಿಗೆ ಆರ್ಥಿಕ ನೆರವು ನೀಡಿ ದೊಡ್ಡ ರಾಷ್ಟ್ರಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ಕಮ್ಯುನಿಸ್ಟ್‌ ನಾಯಕನ ತಂತ್ರಗಾರಿಕೆಯನ್ನು ಭಾರತ, ಅಮೇರಿಕ, ಸೇರಿ ಹಲವು ದೇಶಗಳು ವಿರೋಧಿಸಿವೆ. ಅಧಿಕಾರ ಆಸೆಯ ಮೂಲಕ ವಿಶ್ವಸಂಸ್ಥೆ ರೂಪಿಸಿರುವ ಮಾನವ ಹಕ್ಕುಗಳ ವ್ಯಾಖ್ಯಾನವನ್ನೇ ಬದಲಿಸಲು ಜಿನ್‌ಪಿಂಗ್‌ ಪ್ರಯತ್ನ ಮಾಡುತ್ತಾರೆಂದು ಅಮೆರಿಕ ಎಚ್ಚರಿಸಿದೆ.

ಭಾರತಕ್ಕೆ ಯಾವಾಗಲೂ ಸಮಸ್ಯೆ ಮಾಡುವುದಕ್ಕೆ ನೆರೆಯ ಪಾಕಿಸ್ತಾನಕ್ಕೆ ನೆರವು ನೀಡುವುದು. ಮಿಲಿಟರಿ ಹಾಗೂ ಆರ್ಥಿಕ ಸಹಾಯ ಮಾಡುವ ಮೂಲಕ ಪಾಕಿಸ್ತಾನವನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ.

ಜಿನ್‌ಪಿಂಗ್ ಅವರು ಮೂರನೇ ಅವಧಿಗೆ ಆಯ್ಕೆಯಾದ ವೇಳೆಯೇ, ಭಾರತದ ಗಡಿಯಲ್ಲಿ ವೆಸ್ಟರ್ನ್ ಥಿಯೇಟರ್ ಕಮಾಂಡ್ ಅನ್ನು ಮುನ್ನಡೆಸುತ್ತಿದ್ದ ಮೂವರು ಜನರಲ್‌ಗಳಿಗೆ ಬಡ್ತಿ ನೀಡಿದ್ದಾರೆ.

ಜಿನ್‌ಪಿಂಗ್‌ ಅವಧಿಯಲ್ಲಿ ಟಿಬೆಟ್‌ ಮೇಲೆ ಪ್ರಭುತ್ವ ಸಾಧಿಸಲು ಗಡಿಯಲ್ಲಿ ಭಾರತಕ್ಕೆ ಸಮಸ್ಯೆ ಮಾಡಲಾಗಿತ್ತು. ಬೌದ್ಧ ಧರ್ಮಗುರು ದಲೈ ಲಾಮಾಗೆ ರಕ್ಷಣೆ ನೀಡಿರುವ ಭಾರತವನ್ನು ಟಿಬೆಟ್‌ ವ್ಯವಹಾರದಿಂದ ದೂರ ಇಡಲು 2017ರಲ್ಲಿ ಡೋಕ್ಲಾಮ್‌ ಗಡಿಯಲ್ಲಿ ಶುರು ಮಾಡಿದ ಸಮಸ್ಯೆ 2020ರಲ್ಲಿ ಲಡಾಕ್‌ನಲ್ಲಿ ನಡೆದ ಸಂಘರ್ಷದವರೆಗೂ ಬೆಳೆದಿದ್ದನ್ನು ಗಮನಿಸಬಹುದಾಗಿದೆ.

 

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago