BREAKING NEWS

ಭಾರತಕ್ಕೆ ಮತ್ತಷ್ಟು ಆತಂಕ ಸೃಷ್ಟಿ : ಕ್ಸಿ ಜಿನ್‌ಪಿಂಗ್ ಗೆಲುವು

ಹೊಸದಿಲ್ಲಿ: ಸತತ ಮೂರನೇ ಬಾರಿಗೆ ಚೀನಾ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆಯಾಗಿರುವುದು ಭಾರತ ಸೇರಿ ಅನೇಕ ರಾಷ್ಟ್ರಗಳ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಒಂದು ದಶಕದ ಅವಧಿಯಲ್ಲಿ ಚೀನಾದ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿರುವ ಜಿನ್‌ಪಿಂಗ್‌ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ಜಾಗತಿಕ ವ್ಯಾಪಾರ, ಭದ್ರತೆ, ಮಾನವ ಹಕ್ಕುಗಳ ವಿಚಾರದಲ್ಲಿ ಮುಂದೇನಾಗಲಿದೆಯೋ ಎಂಬ ಆತಂಕ ಸೃಷ್ಟಿಯಾಗಿದೆ.

ಚೀನಾದ ಆರ್ಥಿಕ ಶಕ್ತಿ ಬಳಸಿಕೊಂಡು ವಿದೇಶದಲ್ಲಿ ತನ್ನ ಪ್ರಭಾವ ಹೆಚ್ಚಿಸಲು ಜಿನ್‌ಪಿಂಗ್‌ ಪ್ರಯತ್ನ ಮಾಡುವ ಸಾಧ್ಯತೆ ಇದೆ. ಸಣ್ಣ ಪುಟ್ಟ ರಾಷ್ಟ್ರಗಳಿಗೆ ಆರ್ಥಿಕ ನೆರವು ನೀಡಿ ದೊಡ್ಡ ರಾಷ್ಟ್ರಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ಕಮ್ಯುನಿಸ್ಟ್‌ ನಾಯಕನ ತಂತ್ರಗಾರಿಕೆಯನ್ನು ಭಾರತ, ಅಮೇರಿಕ, ಸೇರಿ ಹಲವು ದೇಶಗಳು ವಿರೋಧಿಸಿವೆ. ಅಧಿಕಾರ ಆಸೆಯ ಮೂಲಕ ವಿಶ್ವಸಂಸ್ಥೆ ರೂಪಿಸಿರುವ ಮಾನವ ಹಕ್ಕುಗಳ ವ್ಯಾಖ್ಯಾನವನ್ನೇ ಬದಲಿಸಲು ಜಿನ್‌ಪಿಂಗ್‌ ಪ್ರಯತ್ನ ಮಾಡುತ್ತಾರೆಂದು ಅಮೆರಿಕ ಎಚ್ಚರಿಸಿದೆ.

ಭಾರತಕ್ಕೆ ಯಾವಾಗಲೂ ಸಮಸ್ಯೆ ಮಾಡುವುದಕ್ಕೆ ನೆರೆಯ ಪಾಕಿಸ್ತಾನಕ್ಕೆ ನೆರವು ನೀಡುವುದು. ಮಿಲಿಟರಿ ಹಾಗೂ ಆರ್ಥಿಕ ಸಹಾಯ ಮಾಡುವ ಮೂಲಕ ಪಾಕಿಸ್ತಾನವನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ.

ಜಿನ್‌ಪಿಂಗ್ ಅವರು ಮೂರನೇ ಅವಧಿಗೆ ಆಯ್ಕೆಯಾದ ವೇಳೆಯೇ, ಭಾರತದ ಗಡಿಯಲ್ಲಿ ವೆಸ್ಟರ್ನ್ ಥಿಯೇಟರ್ ಕಮಾಂಡ್ ಅನ್ನು ಮುನ್ನಡೆಸುತ್ತಿದ್ದ ಮೂವರು ಜನರಲ್‌ಗಳಿಗೆ ಬಡ್ತಿ ನೀಡಿದ್ದಾರೆ.

ಜಿನ್‌ಪಿಂಗ್‌ ಅವಧಿಯಲ್ಲಿ ಟಿಬೆಟ್‌ ಮೇಲೆ ಪ್ರಭುತ್ವ ಸಾಧಿಸಲು ಗಡಿಯಲ್ಲಿ ಭಾರತಕ್ಕೆ ಸಮಸ್ಯೆ ಮಾಡಲಾಗಿತ್ತು. ಬೌದ್ಧ ಧರ್ಮಗುರು ದಲೈ ಲಾಮಾಗೆ ರಕ್ಷಣೆ ನೀಡಿರುವ ಭಾರತವನ್ನು ಟಿಬೆಟ್‌ ವ್ಯವಹಾರದಿಂದ ದೂರ ಇಡಲು 2017ರಲ್ಲಿ ಡೋಕ್ಲಾಮ್‌ ಗಡಿಯಲ್ಲಿ ಶುರು ಮಾಡಿದ ಸಮಸ್ಯೆ 2020ರಲ್ಲಿ ಲಡಾಕ್‌ನಲ್ಲಿ ನಡೆದ ಸಂಘರ್ಷದವರೆಗೂ ಬೆಳೆದಿದ್ದನ್ನು ಗಮನಿಸಬಹುದಾಗಿದೆ.

 

andolana

Recent Posts

ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ‌ ; ಲಾಡ್ಜ್‌ ಶೋಧ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…

26 mins ago

ದೇಶದದ್ಯಾಂತ ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…

36 mins ago

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…

42 mins ago

ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ : ಮಹತ್ವದ ಮಾಹಿತಿ ಕೊಟ್ಟ ಗೃಹ ಸಚಿವ ಪರಮೇಶ್ವರ

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…

44 mins ago

ಸ್ಪೋಟ ದುರಂತ | ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಮಹದೇವಪ್ಪ ; ಬಳಿಕ ಹೇಳಿದ್ದೇನು?

ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…

47 mins ago

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

2 hours ago