BREAKING NEWS

ಭಾರತಕ್ಕೆ ಮತ್ತಷ್ಟು ಆತಂಕ ಸೃಷ್ಟಿ : ಕ್ಸಿ ಜಿನ್‌ಪಿಂಗ್ ಗೆಲುವು

ಹೊಸದಿಲ್ಲಿ: ಸತತ ಮೂರನೇ ಬಾರಿಗೆ ಚೀನಾ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆಯಾಗಿರುವುದು ಭಾರತ ಸೇರಿ ಅನೇಕ ರಾಷ್ಟ್ರಗಳ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಒಂದು ದಶಕದ ಅವಧಿಯಲ್ಲಿ ಚೀನಾದ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿರುವ ಜಿನ್‌ಪಿಂಗ್‌ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ಜಾಗತಿಕ ವ್ಯಾಪಾರ, ಭದ್ರತೆ, ಮಾನವ ಹಕ್ಕುಗಳ ವಿಚಾರದಲ್ಲಿ ಮುಂದೇನಾಗಲಿದೆಯೋ ಎಂಬ ಆತಂಕ ಸೃಷ್ಟಿಯಾಗಿದೆ.

ಚೀನಾದ ಆರ್ಥಿಕ ಶಕ್ತಿ ಬಳಸಿಕೊಂಡು ವಿದೇಶದಲ್ಲಿ ತನ್ನ ಪ್ರಭಾವ ಹೆಚ್ಚಿಸಲು ಜಿನ್‌ಪಿಂಗ್‌ ಪ್ರಯತ್ನ ಮಾಡುವ ಸಾಧ್ಯತೆ ಇದೆ. ಸಣ್ಣ ಪುಟ್ಟ ರಾಷ್ಟ್ರಗಳಿಗೆ ಆರ್ಥಿಕ ನೆರವು ನೀಡಿ ದೊಡ್ಡ ರಾಷ್ಟ್ರಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ಕಮ್ಯುನಿಸ್ಟ್‌ ನಾಯಕನ ತಂತ್ರಗಾರಿಕೆಯನ್ನು ಭಾರತ, ಅಮೇರಿಕ, ಸೇರಿ ಹಲವು ದೇಶಗಳು ವಿರೋಧಿಸಿವೆ. ಅಧಿಕಾರ ಆಸೆಯ ಮೂಲಕ ವಿಶ್ವಸಂಸ್ಥೆ ರೂಪಿಸಿರುವ ಮಾನವ ಹಕ್ಕುಗಳ ವ್ಯಾಖ್ಯಾನವನ್ನೇ ಬದಲಿಸಲು ಜಿನ್‌ಪಿಂಗ್‌ ಪ್ರಯತ್ನ ಮಾಡುತ್ತಾರೆಂದು ಅಮೆರಿಕ ಎಚ್ಚರಿಸಿದೆ.

ಭಾರತಕ್ಕೆ ಯಾವಾಗಲೂ ಸಮಸ್ಯೆ ಮಾಡುವುದಕ್ಕೆ ನೆರೆಯ ಪಾಕಿಸ್ತಾನಕ್ಕೆ ನೆರವು ನೀಡುವುದು. ಮಿಲಿಟರಿ ಹಾಗೂ ಆರ್ಥಿಕ ಸಹಾಯ ಮಾಡುವ ಮೂಲಕ ಪಾಕಿಸ್ತಾನವನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ.

ಜಿನ್‌ಪಿಂಗ್ ಅವರು ಮೂರನೇ ಅವಧಿಗೆ ಆಯ್ಕೆಯಾದ ವೇಳೆಯೇ, ಭಾರತದ ಗಡಿಯಲ್ಲಿ ವೆಸ್ಟರ್ನ್ ಥಿಯೇಟರ್ ಕಮಾಂಡ್ ಅನ್ನು ಮುನ್ನಡೆಸುತ್ತಿದ್ದ ಮೂವರು ಜನರಲ್‌ಗಳಿಗೆ ಬಡ್ತಿ ನೀಡಿದ್ದಾರೆ.

ಜಿನ್‌ಪಿಂಗ್‌ ಅವಧಿಯಲ್ಲಿ ಟಿಬೆಟ್‌ ಮೇಲೆ ಪ್ರಭುತ್ವ ಸಾಧಿಸಲು ಗಡಿಯಲ್ಲಿ ಭಾರತಕ್ಕೆ ಸಮಸ್ಯೆ ಮಾಡಲಾಗಿತ್ತು. ಬೌದ್ಧ ಧರ್ಮಗುರು ದಲೈ ಲಾಮಾಗೆ ರಕ್ಷಣೆ ನೀಡಿರುವ ಭಾರತವನ್ನು ಟಿಬೆಟ್‌ ವ್ಯವಹಾರದಿಂದ ದೂರ ಇಡಲು 2017ರಲ್ಲಿ ಡೋಕ್ಲಾಮ್‌ ಗಡಿಯಲ್ಲಿ ಶುರು ಮಾಡಿದ ಸಮಸ್ಯೆ 2020ರಲ್ಲಿ ಲಡಾಕ್‌ನಲ್ಲಿ ನಡೆದ ಸಂಘರ್ಷದವರೆಗೂ ಬೆಳೆದಿದ್ದನ್ನು ಗಮನಿಸಬಹುದಾಗಿದೆ.

 

andolana

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

2 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

2 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

2 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

2 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

2 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

2 hours ago