BREAKING NEWS

ಚಾಮರಾಜನಗರ: ಚಿರತೆ ದಾಳಿಯಿಂದ ಮರಣ ಹೊಂದಿದ ಬಾಲಕಿಗೆ 15 ಲಕ್ಷ ಪರಿಹಾರ ನೀಡಿದ ಸರ್ಕಾರ

ಚಾಮರಾಜನಗರ: ಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿದ್ದ ಪರಿಣಾಮ ಮುಖ ಊದಿಕೊಂಡಿದ್ದು, ಕಳೆದ 14 ದಿನಗಳಿಂದ ಮೈಸೂರಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜು‌ಲೈ 11ರಂದು ಆಪರೇಷನ್ ಕೂಡ ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಅಸುನೀಗಿದ್ದಾಳೆ ಎಂದು ತಿಳಿದುಬಂದಿದೆ.

ಇನ್ನು, ಚಿರತೆ ದಾಳಿ ಪ್ರಕರಣ ನಡೆದು ಸುಮಾರು 14 ದಿನಗಳು ಕಳೆದಿದೆ. ಚಿರತೆ ಸೆರೆಗಾಗಿ ಚಿರತೆ ದಾಳಿ ನಡೆಸಿದ ಸ್ಥಳ ಹಾಗೂ ಅಕ್ಕಪಕ್ಕದಲ್ಲಿ ಮೂರು ಬೋನ್‌ಗಳನ್ನು ಸಹ ಇಡಲಾಗಿತ್ತು. ಆದರೆ ಇದುವರೆಗೂ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರದಿಂದ 15 ಲಕ್ಷ ರೂ ಪರಿಹಾರ
ಇನ್ನು ಚಿರತೆ ದಾಳಿಯಿಂದ ಮೃತಪಟ್ಟ ಬಾಲಕಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು ಮೃತ ಬಾಲಕಿ ಸುಶೀಲ ಕುಟುಂಬಕ್ಕೆ 15 ಲಕ್ಷ ರೂ ಘೋಷಣೆ ಮಾಡಿದೆ. ಮೃತ ಬಾಲಕಿಯ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ. ‘

ಚಿರತೆ ದಾಳಿಗೆ ತುತ್ತಾದ ಬಾಲಕಿ ಸಾವನ್ನಪ್ಪಿರುವ ಘಟನೆಯಿಂದ ಬೇಸರವಾಗಿದೆ. ನಾನು ತಕ್ಷಣ ಆಕೆಯ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರವನ್ನು ನಿರ್ದೇಶಿಸುತ್ತೇನೆ ಮತ್ತು ಮೃತರ ಕುಟುಂಬಕ್ಕೆ 4,000 ಮಾಸಿಕ ಭತ್ಯೆ ನೀಡಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದರು.

ಏನಿದು ಘಟನೆ?
ರಾಮು ಮತ್ತು ಲಲಿತಾ ದಂಪತಿಯ ಪುತ್ರಿ ಸುಶೀಲಾ ಒಬ್ಬಳೇ ಮನೆ ಮುಂದೆ ಆಟವಾಡುತ್ತಿದ್ದಳು. ಎಲ್ಲಿಂದಲೋ ಕಾಣಿಸಿಕೊಂಡ ಚಿರತೆ ಬಾಲಕಿಯ ಮೇಲೆ ದಾಳಿ ನಡೆಸಿ ಕಾಡಿಗೆ ಎಳೆದೊಯ್ಯಲು ಯತ್ನಿಸಿತ್ತು. ಅದು ಅವಳನ್ನು 200 ಮೀಟರ್ ವರೆಗೆ ಎಳೆದಿತ್ತು. ಬಾಲಕಿಯ ಕಿರುಚಾಟ ಕೇಳಿದ ಪೋಷಕರು ಹಾಗೂ ಗ್ರಾಮಸ್ಥರು ಲಾಠಿ ಬೀಸಿ ಚಿರತೆಯನ್ನು ಓಡಿಸಿದ್ದಾರೆ. ಗಲಾಟೆ ಹಿನ್ನೆಲೆಯಲ್ಲಿ ಚಿರತೆ ಬಾಲಕಿಯನ್ನು ಬಿಟ್ಟು ಕಾಡಿಗೆ ಪರಾರಿಯಾಗಿತ್ತು. ಘಟನೆಯಲ್ಲಿ ಬಾಲಕಿ ಸುಶೀಲ ಗಂಭೀರವಾಗಿ ಗಾಯಗೊಂಡಿದ್ದು, ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.

ಚಿರತೆ ದಾಳಿ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಬಾಲಕಿಯನ್ನು ಆಸ್ಪತ್ರೆಗೆ ಭೇಟಿ ಮಾಡಿ ಕುಟುಂಬದವರೊಂದಿಗೆ ಮಾತನಾಡಿದ್ದರು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೂಡ ಅವರನ್ನು ಭೇಟಿ ಮಾಡಿದ್ದರು. ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸೋಲಿಗ ಬುಡಕಟ್ಟಿನ ಜನರು ಅರಣ್ಯಕ್ಕೆ ಸಮೀಪವಿರುವ ಸ್ಥಳದಲ್ಲಿ ವಾಸಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಚಿರತೆ ಹಾವಳಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ.

ರಾತ್ರಿ ನಡೆದ ಈ ಘಟನೆ ಇಡೀ ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆತಂಕ ಮೂಡಿಸಿದೆ. ಇದರಿಂದ ಮನೆಯಿಂದ ಹೊರಗೆ ಕಾಲಿಡಲು, ಜಮೀನಿಗೆ ಹೋಗಲು ಭಯವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಚಿರತೆ ದಾಳಿಯ ಭೀತಿಯಲ್ಲಿ ಜನ ಜೀವನ ನಡೆಸುವಂತಾಗಿದೆ.

ಮನೆಗೇ ನುಗ್ಗಿದ ಚಿರತೆ
ಮತ್ತೊಂದು ಘಟನೆಯಲ್ಲಿ ವಾಸದ ಮನೆಗೆ ಚಿರತೆ ನುಗ್ಗಿದ ಘಟನೆ ಹಾಸನ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ತಾಲೂಕಿನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರು ವಾಸವಾಗಿರುವ ಮನೆಗೆ ಚಿರತೆ ನುಗ್ಗಿದೆ. ಧರ್ಮ ಅವರ ವಾಸದ ಮನೆಗೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಚಿರತೆ ಮನೆಗೆ ನುಗ್ಗಿದೆ. ನಂತರ ಸ್ಥಳೀಯರ ಮಾಹಿತಿ ಆಧಾರಿಸಿ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂಧಿ ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

andolanait

Recent Posts

ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ : ರಂಗೇಗೌಡ ಸಲಹೆ

ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ…

10 mins ago

ಲಂಚ | ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ

ಗದಗ : ಗುತ್ತಿಗೆದಾರನಿಂದ ಕಮಿಷನ್‌ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…

31 mins ago

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

3 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

3 hours ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

3 hours ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

3 hours ago