BREAKING NEWS

ಚಾಮರಾಜನಗರ: ಚಿರತೆ ದಾಳಿಯಿಂದ ಮರಣ ಹೊಂದಿದ ಬಾಲಕಿಗೆ 15 ಲಕ್ಷ ಪರಿಹಾರ ನೀಡಿದ ಸರ್ಕಾರ

ಚಾಮರಾಜನಗರ: ಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿದ್ದ ಪರಿಣಾಮ ಮುಖ ಊದಿಕೊಂಡಿದ್ದು, ಕಳೆದ 14 ದಿನಗಳಿಂದ ಮೈಸೂರಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜು‌ಲೈ 11ರಂದು ಆಪರೇಷನ್ ಕೂಡ ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಅಸುನೀಗಿದ್ದಾಳೆ ಎಂದು ತಿಳಿದುಬಂದಿದೆ.

ಇನ್ನು, ಚಿರತೆ ದಾಳಿ ಪ್ರಕರಣ ನಡೆದು ಸುಮಾರು 14 ದಿನಗಳು ಕಳೆದಿದೆ. ಚಿರತೆ ಸೆರೆಗಾಗಿ ಚಿರತೆ ದಾಳಿ ನಡೆಸಿದ ಸ್ಥಳ ಹಾಗೂ ಅಕ್ಕಪಕ್ಕದಲ್ಲಿ ಮೂರು ಬೋನ್‌ಗಳನ್ನು ಸಹ ಇಡಲಾಗಿತ್ತು. ಆದರೆ ಇದುವರೆಗೂ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರದಿಂದ 15 ಲಕ್ಷ ರೂ ಪರಿಹಾರ
ಇನ್ನು ಚಿರತೆ ದಾಳಿಯಿಂದ ಮೃತಪಟ್ಟ ಬಾಲಕಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು ಮೃತ ಬಾಲಕಿ ಸುಶೀಲ ಕುಟುಂಬಕ್ಕೆ 15 ಲಕ್ಷ ರೂ ಘೋಷಣೆ ಮಾಡಿದೆ. ಮೃತ ಬಾಲಕಿಯ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ. ‘

ಚಿರತೆ ದಾಳಿಗೆ ತುತ್ತಾದ ಬಾಲಕಿ ಸಾವನ್ನಪ್ಪಿರುವ ಘಟನೆಯಿಂದ ಬೇಸರವಾಗಿದೆ. ನಾನು ತಕ್ಷಣ ಆಕೆಯ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರವನ್ನು ನಿರ್ದೇಶಿಸುತ್ತೇನೆ ಮತ್ತು ಮೃತರ ಕುಟುಂಬಕ್ಕೆ 4,000 ಮಾಸಿಕ ಭತ್ಯೆ ನೀಡಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದರು.

ಏನಿದು ಘಟನೆ?
ರಾಮು ಮತ್ತು ಲಲಿತಾ ದಂಪತಿಯ ಪುತ್ರಿ ಸುಶೀಲಾ ಒಬ್ಬಳೇ ಮನೆ ಮುಂದೆ ಆಟವಾಡುತ್ತಿದ್ದಳು. ಎಲ್ಲಿಂದಲೋ ಕಾಣಿಸಿಕೊಂಡ ಚಿರತೆ ಬಾಲಕಿಯ ಮೇಲೆ ದಾಳಿ ನಡೆಸಿ ಕಾಡಿಗೆ ಎಳೆದೊಯ್ಯಲು ಯತ್ನಿಸಿತ್ತು. ಅದು ಅವಳನ್ನು 200 ಮೀಟರ್ ವರೆಗೆ ಎಳೆದಿತ್ತು. ಬಾಲಕಿಯ ಕಿರುಚಾಟ ಕೇಳಿದ ಪೋಷಕರು ಹಾಗೂ ಗ್ರಾಮಸ್ಥರು ಲಾಠಿ ಬೀಸಿ ಚಿರತೆಯನ್ನು ಓಡಿಸಿದ್ದಾರೆ. ಗಲಾಟೆ ಹಿನ್ನೆಲೆಯಲ್ಲಿ ಚಿರತೆ ಬಾಲಕಿಯನ್ನು ಬಿಟ್ಟು ಕಾಡಿಗೆ ಪರಾರಿಯಾಗಿತ್ತು. ಘಟನೆಯಲ್ಲಿ ಬಾಲಕಿ ಸುಶೀಲ ಗಂಭೀರವಾಗಿ ಗಾಯಗೊಂಡಿದ್ದು, ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.

ಚಿರತೆ ದಾಳಿ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಬಾಲಕಿಯನ್ನು ಆಸ್ಪತ್ರೆಗೆ ಭೇಟಿ ಮಾಡಿ ಕುಟುಂಬದವರೊಂದಿಗೆ ಮಾತನಾಡಿದ್ದರು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೂಡ ಅವರನ್ನು ಭೇಟಿ ಮಾಡಿದ್ದರು. ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸೋಲಿಗ ಬುಡಕಟ್ಟಿನ ಜನರು ಅರಣ್ಯಕ್ಕೆ ಸಮೀಪವಿರುವ ಸ್ಥಳದಲ್ಲಿ ವಾಸಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಚಿರತೆ ಹಾವಳಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ.

ರಾತ್ರಿ ನಡೆದ ಈ ಘಟನೆ ಇಡೀ ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆತಂಕ ಮೂಡಿಸಿದೆ. ಇದರಿಂದ ಮನೆಯಿಂದ ಹೊರಗೆ ಕಾಲಿಡಲು, ಜಮೀನಿಗೆ ಹೋಗಲು ಭಯವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಚಿರತೆ ದಾಳಿಯ ಭೀತಿಯಲ್ಲಿ ಜನ ಜೀವನ ನಡೆಸುವಂತಾಗಿದೆ.

ಮನೆಗೇ ನುಗ್ಗಿದ ಚಿರತೆ
ಮತ್ತೊಂದು ಘಟನೆಯಲ್ಲಿ ವಾಸದ ಮನೆಗೆ ಚಿರತೆ ನುಗ್ಗಿದ ಘಟನೆ ಹಾಸನ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ತಾಲೂಕಿನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರು ವಾಸವಾಗಿರುವ ಮನೆಗೆ ಚಿರತೆ ನುಗ್ಗಿದೆ. ಧರ್ಮ ಅವರ ವಾಸದ ಮನೆಗೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಚಿರತೆ ಮನೆಗೆ ನುಗ್ಗಿದೆ. ನಂತರ ಸ್ಥಳೀಯರ ಮಾಹಿತಿ ಆಧಾರಿಸಿ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂಧಿ ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

15 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago